ಡಾ. ನಾರಯಣ ಮೊಗಸಾಲೆಯವರು.
ಕಾರ್ಕಳ ತಾಲೂಕಿನ ಕಾಂತಾವರ ಎಂಬ ಹಿಂದುಳಿದ ಪ್ರದೇಶದಲ್ಲಿ ವೈದ್ಯಕೀಯ ವೃತ್ತಿಯಲ್ಲಿರುವ ಮೊಗಸಾಲೆಯವರು ಜೊತೆಜೊತೆಯಲ್ಲಿ ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ ಸಂಘಟಕರಾಗಿ ತಮ್ಮನ್ನು ತೊಡಗಿಸಿಕೊಂಡವರು. ಕಾಂತಾವರದಲ್ಲಿ ಕನ್ನಡ ಸಂಘವನ್ನು ಹುಟ್ಟುಹಾಕಿ ತನ್ಮೂಲಕ ‘ಮುದ್ರಣ ಕಾವ್ಯ ಪ್ರಶಸ್ತಿ’, ರಾಜ್ಯಮಟ್ಟದ ವರ್ಧಮಾನ ಪ್ರಶಸ್ತಿ ಪೀಠದಿಂದ ವರ್ಧಮಾನ ಪ್ರಶಸ್ತಿ ಸ್ಥಾಪಿಸಿದ ಅಧ್ವರ್ಯ ಡಾ. ಮೊಗಸಾಲೆಯವರು. ಎರಡು ಬಾರಿ ೧೯೯೪ ಹಾಗು ೧೯೯೬ರಲ್ಲಿ ತಾಲ್ಲೂಕು ಮಟ್ಟದ ಸಾಹಿತ್ಯ ಸಮ್ಮೇಳನ ನಡೆಸಿದ ಸಾಹಸಿ.
೧೯೮೦-೮೩ರ ಅವಧಿಯ ಸಾಹಿತ್ಯ ಅಕಾಡೆಮಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ ಶ್ರೀಯುತರು ಕಥೆ, ಕವನ, ಕಾದಂಬರಿ, ಪ್ರವಾಸ ಕಥನ ಮುಂತಾಗಿ ಅನೇಕ ಕೃತಿ ರಚನಕಾರರಾಗಿ ಸಾಹಿತ್ಯ ಸೇವೆ ಮಾಡಿದ್ದಾರೆ. ಇವರ ಅನೇಕ ಕೃತಿಗಳು ಮಲಯಾಳ, ಹಿಂದಿ ಹಾಗು ಆಂಗ್ಲ ಭಾಷೆಗಳಿಗೆ ಅನುವಾದಿಸಲ್ಪಟ್ಟಿವೆ.
ರಾಜ್ಯ ಸಾಹಿತ್ಯ ಅಕಾಡೆಮಿ, ಸಾಹಿತ್ಯ ಸಮ್ಮೇಳನಗಳಲ್ಲಿ ಗೌರವ ಪ್ರಶಸ್ತಿಗಳನ್ನು ಪಡೆದಿರುವ ವೈದ್ಯ – ಸಾಹಿತಿ ಡಾ. ನಾ. ಮೊಗಸಾಲೆ ಅವರು.
Categories
ಡಾ. ನಾ. ಮೊಗಸಾಲೆ
