Categories
ಜಾನಪದ ರಾಜ್ಯೋತ್ಸವ 2004 ರಾಜ್ಯೋತ್ಸವ ಪ್ರಶಸ್ತಿ

ಡಾ. ಮಲ್ಲಿಕಾರ್ಜುನ ಶಿ. ಲಠ್ಠೆ

ಬೆಳಗಾವಿ ತಾಲ್ಲೂಕಿನ ಮುತನಾಳದಲ್ಲಿ ೧೯೩೨ರಲ್ಲಿ ಹುಟ್ಟಿದ ಡಾ. ಎಂ.ಎಸ್.ಲಠ್ಠೆ ಅವರು ಬೆಳಗಾವಿಯಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸ ಮುಗಿಸಿ ಅನಂತರ ೧೯೫೮ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದರು. ಪದವಿ ತರಗತಿಯಲ್ಲಿ ಇದ್ದಾಗಲೇ ಜಾನಪದದ ಬಗ್ಗೆ ವಿಶೇಷ ಆಸಕ್ತಿ ಬೆಳೆಸಿಕೊಂಡ ಇವರಿಗೆ ಜಾನಪದದ ವಿವಿಧ ವಿಷಯಗಳನ್ನು ಸಂಗ್ರಹಿಸುವುದು ಒಂದು ಹವ್ಯಾಸವಾಯಿತು.
ಜಾನಪದ ಹಾಗೂ ಸಾಹಿತ್ಯ ಕ್ಷೇತ್ರಗಳೆರಡರಲ್ಲಿಯೂ ಕೆಲಸ ಮಾಡಿರುವ ಶ್ರೀಯುತರು ಇದುವರೆಗೆ ಸುಮಾರು ೩೪ ಕೃತಿಗಳನ್ನು ಹೊರತಂದಿದ್ದಾರೆ. ಸಭೆ ಸಮ್ಮೇಳನಗಳಲ್ಲಿ ವಿಚಾರ ಗೋಷ್ಠಿಗಳಲ್ಲಿ ನೂರಾರು ಪ್ರಬಂಧಗಳನ್ನು ಮಂಡಿಸಿದ್ದಾರೆ. ಕರ್ನಾಟಕ ವಿಶ್ವವಿದ್ಯಾನಿಲಯ ಹಾಗೂ ಯು.ಜಿ.ಸಿ. ನೆರವಿನೊಂದಿಗೆ ಉತ್ತರ ಕರ್ನಾಟಕದ ಏಳು ಜಿಲ್ಲೆಗಳ ಜಾನಪದ ಕಥೆ ಮತ್ತು ಹಾಡುಗಳ ಸಂಗ್ರಹ, ಸಂಪಾದನೆ, ಪ್ರಕಟನೆ ಮಾಡಿದ್ದಾರೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ, ಜಾನಪದ ಯಕ್ಷಗಾನ ಅಕಾಡೆಮಿ ಬಹುಮಾನಗಳನ್ನು ಪಡೆದಿರುವ ಶ್ರೀಯುತ ಮಲ್ಲಿಕಾರ್ಜುನ ಲರೆಯವರು ಕನ್ನಡದ ಅಪರೂಪದ ಲೇಖಕರು.