Categories
ರಾಜ್ಯೋತ್ಸವ 2018 ರಾಜ್ಯೋತ್ಸವ ಪ್ರಶಸ್ತಿ ವೈದ್ಯಕೀಯ

ಡಾ. ಸೀತಾರಾಮಭಟ್

ವೈದ್ಯಕೀಯ ಕ್ಷೇತ್ರದಲ್ಲಿ ಹೃದಯ ಶಸ್ತ್ರಚಿಕಿತ್ಸೆಯಲ್ಲಿ ಗಮನಾರ್ಹ ಸೇವೆ ಸಲ್ಲಿಸಿದವರು ಡಾ.ಪಿ.ಎಸ್.ಸೀತಾರಾಮ ಭಟ್. ಮಕ್ಕಳ ಹೃದಯ ಶಸ್ತ್ರಚಿಕಿತ್ಸೆಯ ಮೂಲಕ ಹಲವರಿಗೆ ಜೀವದಾನ ಮಾಡಿದ ವೈದ್ಯರು.
ವೈದ್ಯಕೀಯ ಉಪನ್ಯಾಸಕ, ಆಡಳಿತಗಾರ ಮತ್ತು ಅತ್ಯುತ್ತಮ ಕೌಶಲ್ಯದ ಶಸ್ತ್ರಚಿಕಿತ್ಸಕರಾಗಿ ಹೆಸರುವಾಸಿಯಾಗಿರುವ ಸೀತಾರಾಮ ಭಟ್ ಅವರು ಬೆಂಗಳೂರಿನ ಪ್ರತಿಷ್ಠಿತ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಕಾಡಿಯೋತೋರಿಕ್ ಶಸ್ತ್ರಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದವರು. ಸಂಸ್ಥೆಯಲ್ಲಿ ಎರಡು ದಶಕಕ್ಕೂ ಮೀರಿದ ಸೇವೆ ಅವರದ್ದು. ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ೨೦೧೭ರಲ್ಲಿ ಮೊಟ್ಟಮೊದಲ ಬಾರಿಗೆ ಹೃದಯ ಕಸಿ ಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ಸೀತಾರಾಮ ಭಟ್ಕದ್ದು. ಪ್ರತಿ ದಿನ ಸಂಸ್ಥೆಯಲ್ಲಿ ಮಕ್ಕಳೂ ಸೇರಿದಂತೆ ೧೫ ಮಂದಿಗೆ ಹೃದಯ ಶಸ್ತ್ರಚಿಕಿತ್ಸೆ ನೆರವೇರಿಸಲಾಗುತ್ತಿದ್ದು ಆ ಕಾರ್ಯದಲ್ಲಿ ಸೀತಾರಾಮಭಟ್ಕದ್ದು ಪ್ರಮುಖ ಪಾತ್ರ ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರ, ಪಶ್ಚಿಮಬಂಗಾಳ, ಮಧ್ಯಪ್ರದೇಶ, ರಾಜಸ್ತಾನ, ತಮಿಳುನಾಡು, ಕೇರಳ, ಉತ್ತರಪ್ರದೇಶ, ಒರಿಸ್ಸಾ, ಬಿಹಾರ ಮುಂತಾದೆಡೆ ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಿರುವ ಅವರು ಆರೋಗ್ಯ ಪ್ರವಾಸೋದ್ಯಮದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ವಿದೇಶಗಳ ರೋಗಿಗಳಿಗೆ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಶಸ್ತ್ರಚಿಕಿತ್ಸೆ ನೆರವೇರಿಸಿ ನಾಡಿನ ಕೀರ್ತಿ ಬೆಳಗಿದ್ದಾರೆ.