Categories
ರಾಜ್ಯೋತ್ಸವ 2015 ರಾಜ್ಯೋತ್ಸವ ಪ್ರಶಸ್ತಿ ಸಮೂಹ ಮಾದ್ಯಮ

ನಾಗಮಣಿ ಎಸ್.ರಾವ್

ಮುದ್ರಣ ಹಾಗೂ ವಿದ್ಯುನ್ಮಾನ ಎರಡೂ ಕ್ಷೇತ್ರಗಳಲ್ಲೂ ಕಾರ್ಯನಿರತ ಪತ್ರಕರ್ತರು ಎನಿಸಿಕೊಂಡ ಮೊದಲ ಮಹಿಳೆ ಶ್ರೀಮತಿ ನಾಗಮಣಿ.ಎಸ್.ರಾವ್ ಅವರು. ತಾಯಿನಾಡು ಪತ್ರಿಕೆಯಲ್ಲಿ ಕೆಲಸ ಮಾಡುವುದರ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿರಿಸಿದ ನಾಗಮಣಿ ಎಸ್.ರಾವ್ ಅವರು ಹೆಸರು ಮಾಡಿದ್ದು ಆಕಾಶವಾಣಿಯ ಸುದ್ದಿ ವಿಭಾಗದ ಭಾತೀದಾರರು ಹಾಗೂ ವಾರ್ತಾ ವಾಚಕರಾಗಿ, ಪ್ರಾದೇಶಿಕ ಭಾಷೆಗಳಲ್ಲಿ ಹೆಚ್ಚು ಹೆಚ್ಚು ಕಾರ್ಯಕ್ರಮಗಳನ್ನು ನೀಡುವ ಆಕಾಶವಾಣಿಯಲ್ಲಿ ಕನ್ನಡ ವಾರ್ತಾ ವಿಭಾಗವನ್ನು ಸಮರ್ಥವಾಗಿ ಕಟ್ಟುವಲ್ಲಿ ಶ್ರಮಿಸಿದವರಲ್ಲಿ ನಾಗಮಣಿ.ಎಸ್.ರಾವ್ ಅವರು ಪ್ರಮುಖರು.
ಕರ್ನಾಟಕ ಲೇಖಕಿಯರ ಸಂಘದಲ್ಲಿ ಸಕ್ರಿಯವಾಗಿ ಪಾಲ್ಗೊಂಡ ನಾಗಮಣಿ ಎಸ್.ರಾವ್ ಅವರು ಪ್ರದೇಶ ಸಮಾಚಾರ ಓದುವುದರಲ್ಲಿ ಪಂಡಿತ ಪಾಮರರಿಬ್ಬರ ಮೆಚ್ಚುಗೆ ಪಡೆದವರು. ಸಾಹಿತ್ಯ ಕೃತಿಗಳನ್ನೂ ರಚಿಸಿರುವ ಇವರು ಟಿಎಸ್ಸಾರ್ ಪ್ರಶಸ್ತಿಯೂ ಸೇರಿದಂತೆ ಹಲವಾರು ವೃತ್ತಿ ಗೌರವ ಪುರಸ್ಕಾರಗಳಿಗೆ ಪಾತ್ರರಾಗಿದ್ದಾರೆ.