Categories
ಚಿತ್ರಕಲೆ ರಾಜ್ಯೋತ್ಸವ 2015 ರಾಜ್ಯೋತ್ಸವ ಪ್ರಶಸ್ತಿ

ಪಿ.ಎಸ್. ಕಡೇಮನಿ

ಗ್ರಾಮೀಣ ಪರಿಸರದ ದೃಶ್ಯಗಳನ್ನು ಚಿತ್ರಿಸುವಲ್ಲಿ ನೈಪುಣ್ಯತೆ ಸಾಧಿಸಿರುವ ಪೊನ್ನಪ್ಪ ಎಸ್.ಕಡೇಮನಿಯವರು ಚಿತ್ರಕಲಾ ಉಪನ್ಯಾಸಕರಾಗಿ ಕೆಲಸ ಮಾಡಿದವರು. ಕಲಾಶಿಕ್ಷಣವನ್ನು ಧಾರವಾಡ, ವಿಜಯಪುರ ಹಾಗೂ ಹಂಪಿಗಳಲ್ಲಿ ಪಡೆದುಕೊಂಡ ಇವರು ಕಲಾಉಪನ್ಯಾಸಕರಾಗಿ ವಿಜಯಪುರದ ಶ್ರೀಸಿದ್ದೇಶ್ವರ ಚಿತ್ರ ಕಲಾ ಮಹಾವಿದ್ಯಾಲಯದಲ್ಲಿ ಕೆಲಸ ಆರಂಭಿಸಿ ಅಲ್ಲಿಯೇ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದರು.
ಹಳ್ಳಿಗಾಡಿನ ವಾಸ್ತವ ಚಿತ್ರಣವನ್ನು ಜಲವರ್ಣ ಹಾಗೂ ತೈಲವರ್ಣಗಳಲ್ಲಿ ಚಿತ್ರಿಸುವುದನ್ನು ಕರಗತ ಮಾಡಿಕೊಂಡಿರುವ ಇವರು ಅನೇಕ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಬಹುಮಾನ ಪಡೆದಿದ್ದಾರೆ. ಮೈಸೂರು ದಸರಾ ಕಲಾಪ್ರದರ್ಶನದಲ್ಲಿ ಪುರಸ್ಕೃತರಾಗಿರುವ ಪೊನ್ನಪ್ಪ ಅವರು ಭಾವಚಿತ್ರಗಳನ್ನು ರಚಿಸುವಲ್ಲಿ ಬಹುಖ್ಯಾತಿ ಪಡೆದಿದ್ದಾರೆ.