ಸಂಜೆ ಬಾನಿನಂಚಿನಲ್ಲಿ
ಬಿದ್ದ ಬಿದಿಗೆ ಚಂದಿರ
ಶಚೀ ತೀರ್ಥದಾಳದಲ್ಲಿ
ಶಕುಂತಲೆಯ ಉಂಗುರ.
ದುರ್ವಾಸರ ಶಾಪವಿಗೋ
ಕವಿಯುತಿಹುದು ಸುತ್ತಲೂ
ಕಂಡುದೆಲ್ಲ ಜಾರುತಿಹುದು
ಮೆಲ್ಲನಿರುಳ ತಮದೊಳು.
ಅಸಹಾಯಕ ತಾರೆಬಳಗ
ಹನಿಗಣ್ಣೊಳು ನೀರವ
ಸುಯ್ವಗಾಳಿ ತಡೆಯುತಿಹುದು
ಉಕ್ಕಿಬರುವ ದುಃಖವ.
ಸಂಜೆ ಬಾನಿನಂಚಿನಲ್ಲಿ
ಬಿದ್ದ ಬಿದಿಗೆ ಚಂದಿರ
ಶಚೀ ತೀರ್ಥದಾಳದಲ್ಲಿ
ಶಕುಂತಲೆಯ ಉಂಗುರ.
ದುರ್ವಾಸರ ಶಾಪವಿಗೋ
ಕವಿಯುತಿಹುದು ಸುತ್ತಲೂ
ಕಂಡುದೆಲ್ಲ ಜಾರುತಿಹುದು
ಮೆಲ್ಲನಿರುಳ ತಮದೊಳು.
ಅಸಹಾಯಕ ತಾರೆಬಳಗ
ಹನಿಗಣ್ಣೊಳು ನೀರವ
ಸುಯ್ವಗಾಳಿ ತಡೆಯುತಿಹುದು
ಉಕ್ಕಿಬರುವ ದುಃಖವ.
Leave A Comment