ಹಿರಿಯ ಸ್ವಾತಂತ್ರ್ಯ ಹೋರಾಟಗಾರು, ಸಮಾಜಸೇವಾ ಕಾರ್ಯಕರ್ತರು ಮತ್ತು ಹಿರಿಯ ಕಾಂಗ್ರೆಸ್ ಧುರೀಣರು ಶೀ ಎಂ.ಕೆ.ಎಚ್. ನಾಗಲಿಂಗಾಚಾರ್ ಅವರು.
೧೯೪೨ರ ಕ್ವಿಟ್ ಇಂಡಿಯಾ ಚಳುವಳಿ ಮಾಡು ಇಲ್ಲವೆ ಮಡಿ ಎಂಬ ಗಾಂಧೀಜಿಯವರು ಕರೆಗೆ ಓಗೊಟ್ಟು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿ ೮ ತಿಂಗಳ ಕಾರಾಗೃಹ ವಾಸವನ್ನು ಅನುಭವಿಸಿದವರು. ಸ್ವಾತಂತ್ರ್ಯ ಹೋರಾಟವಲ್ಲದೆ ಸಮಾಜಸೇವೆಯಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡ ಸರ್ಕಾರಿ ಆಸ್ಪತ್ರೆ, ಸರ್ಕಾರಿ ಪ್ರೌಢಶಾಲೆ, ಹೆಣ್ಣು ಮಕ್ಕಳ ಶಾಲೆಯ ನಿರ್ಮಾಣ ಶ್ರೀಯುತರ ಸಾಧನೆಗಳು, ದಾವಣಗೆರೆಯಲ್ಲಿ ವಿಶ್ವಕರ್ಮ ಸಮಾಜ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ೨೪ ಎಕರೆ ಜಮೀನು ದಾನ, ಭೂದಾನ ಸಂದರ್ಭದಲ್ಲಿ ೩ ಎಕರೆ ಭೂಮಿ ದಾನ ಹಾಗೂ ಹಲವು ಸಂಘ ಸಂಸ್ಥೆಗಳಿಗೆ ಕೊಡುಗೆಗಳನ್ನು ನೀಡಿರುವ ಶ್ರೀಯುತರು ಮಾಯಾಕೊಂಡ ಪುರಸಭೆಯ ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ ೩೦ ವರ್ಷಗಳ ಕಾಲ ಸೇವೆ ಸಲ್ಲಿಸಿ ಜನರ ಪ್ರೀತಿ, ಗೌರವಗಳನ್ನು ಸಂಪಾದಿಸಿದ್ದಾರೆ. ಮಾಯಾಗೊಂಡದಲ್ಲಿ ಬಾಲಿಕಾ ಪ್ರಾಥಮಿಕ ಪಾಠಶಾಲೆ ಕಟ್ಟಿಸಿ ಮಾನ್ಯತೆ ಪಡೆದಿದ್ದಾರೆ. ಪ್ರಧಾನ ಮಂತ್ರಿಗಳಾಗಿದ್ದ ಶ್ರೀಮತಿ ಇಂದಿರಾಗಾಂಧಿಯವರಿಂದ ತಾಮ್ರ ಪತ್ರ ಪಡೆದಿರುವ ಶ್ರೀಯುತರು ಸಮಾಜಕ್ಕೆ ಸಲ್ಲಿಸಿದ ನಿಷ್ಕಾಮ ಸೇವೆ ಅನುಪಮ ಹಾಗೂ ಅನುಕರಣೀಯ.
ಶತಾಯುಷಿಗಳಾಗಿದ್ದು ಈ ಇಳಿವಯಸ್ಸಿನಲ್ಲೂ ಲವಲವಿಕೆಯಿಂದ ಓಡಾಡಿ ಸಮಾಜ ಸೇವೆ ಮಾಡುತ್ತಿರುವ ಹಿರಿಯ ಗಾಂಧೀವಾದಿ ಶ್ರೀ ಎಂ.ಕೆ.ಹೆಚ್. ನಾಗಲಿಂಗಾಚಾರ್ ಅವರು.
Categories