Categories
ಪತ್ರಿಕೋದ್ಯಮ ರಾಜ್ಯೋತ್ಸವ 2018 ರಾಜ್ಯೋತ್ಸವ ಪ್ರಶಸ್ತಿ

ಶ್ರೀ ಜಿ. ಎನ್. ರಂಗನಾಥರಾವ್

ಹಿರಿಯ ಪತ್ರಕರ್ತರಾದ ಜಿ.ಎನ್.ರಂಗನಾಥರಾವ್ಅ ವರು ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿದ್ದು, ಸುಧಾ ಪತ್ರಿಕೆಯ ಸಹ ಸಂಪಾದಕರಾಗಿ ಕೆಲಸ ಮಾಡಿದ್ದಾರೆ.
ಜಿಎನ್ನಾ ಪ್ರಸ್ತುತ ಕಸ್ತೂರಿ ಮಾಸಿಕದ ಸಂಪಾದಕರು. ಹಲವಾರು ಆಂಗ್ಲ ಕೃತಿಗಳನ್ನು ಕನ್ನಡಕ್ಕೆ ತಂದಿರುವ ಜಿಎನ್ನಾರ ಅವರು ಭಾರತೀಯ ವಿದ್ಯಾಭವನದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ.
ಇವರು ರಚಿಸಿರುವ ಪತ್ರಿಕೋದ್ಯಮ ಪಠ್ಯ ಬೆಂಗಳೂರು ವಿವಿಯ ಪಠ್ಯ ಪುಸ್ತಕವಾಗಿದೆ. ಇವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಹಾಗೂ ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಗೌರವ ಪ್ರಶಸ್ತಿಯೂ ಸೇರಿದಂತೆ ಹಲವು ಪ್ರಶಸ್ತಿಗಳು ಲಭಿಸಿವೆ.