ಶಿಕ್ಷಣ, ಸಮಾಜಸೇವೆ ಮತ್ತು ಗ್ರಾಮೀಣ ಸೇವೆಯಲ್ಲಿ ಸದಾ ನಿರತರಾಗಿರುವವರು ಶ್ರೀ ಧರ್ಮಸ್ಥಳ ಸುರೇಂದ್ರಕುಮಾರ್, ಶ್ರೀಕ್ಷೇತ್ರದ ಹಲವು ಧಾರ್ಮಿಕ-ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡವರು.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರದ ಸುರೇಂದ್ರಕುಮಾರ್ ೧೯೫೧ರ ಮೇ. ೩೧ರಂದು ಜನಿಸಿದರು. ವಿದ್ಯಾಭ್ಯಾಸದ ಬಳಿಕ ಶ್ರೀ ಧರ್ಮಸ್ಥಳ ಕ್ಷೇತ್ರದ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯರಾದವರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾಗಿ ಶ್ರಮಿಸಿದವರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯಶಸ್ವಿ ಅನುಷ್ಠಾನಗೊಳಿಸಿದ ಅವರು ಶ್ರೀಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ಮೂಲಕ ಸಾಹಿತ್ಯ, ಕಲೆ, ಸಂಸ್ಕೃತಿಕ ಚಟುವಟಿಕೆಗಳನ್ನು ಕೈಗೊಂಡವರು. ಶ್ರೀ ಕ್ಷೇತ್ರದ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ ಉಪಾಧ್ಯಕ್ಷರಾಗಿ ಐದು ದಶಕಗಳಿಂದಲೂ ಶ್ರಮಿಸಿದ್ದು ಚಿತ್ರಕಲಾ ಪರಿಷತ್ತಿನ ಸದಸ್ಯರು, ಕರ್ನಾಟಕ ಬ್ಯಾಂಕಿನ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Categories
ಶ್ರೀ ಡಿ. ಸುರೇಂದ್ರಕುಮಾರ್
