ಕರ್ನಾಟಕದ ಹಲವಾರು ಪ್ರಸಿದ್ಧ ಸಾಹಿತಿಗಳೊಂದಿಗೆ ನಿಕಟ ಸಂಪರ್ಕವಿಟ್ಟುಕೊಂಡಿರುವ ಶಿಕ್ಷಕರು ಹಾಗೂ ಸಾಹಿತಿ ಶ್ರೀ ಬೆಳಗೆರೆ ಕೃಷ್ಣಶಾಸ್ತ್ರಿ ಅವರು, ಬೆಳಗೆರೆ ತಾಲೂಕಿನ ಬೆಳಗೆರೆ ಗ್ರಾಮದಲ್ಲಿ ಜನಿಸಿದರು. ಮೂಲತಃ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಚಿತ್ರದುರ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿನ ಶಾಲೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವಾರು ಶಾಲೆಗಳನ್ನು ಕಟ್ಟಿದವರು. ಶ್ರೀಯುತರ ತಂದೆ ಪ್ರಸಿದ್ಧ ಸಂಸ್ಕೃತ ವಿದ್ವಾಂಸರು. ‘ಮರೆಯಲಾದೀತೆ, ‘ಸಾಹಿತಿಗಳ ಸ್ಮೃತಿ’, ‘ಹಳ್ಳಿ ಮೇಷ್ಟ್ರು’ ಮುಂತಾದ ಸಾಹಿತ್ಯಕೃತಿಗಳನ್ನು ರಚಿಸಿದ್ದಾರೆ. ಗಾಂಧಿ, ರಮಣ ಮುಂತಾದವರೊಂದಿಗೆ ಸಂಪರ್ಕವನ್ನಿಟ್ಟುಕೊಂಡು ಬೆಳಗೆರೆ ಗ್ರಾಮವನ್ನು ಸಾಂಸ್ಕೃತಿಕ ಗ್ರಾಮವನ್ನಾಗಿ ರೂಪಿಸಿದರು.
ಆದರ್ಶ ಶಿಕ್ಷಕರಾಗಿ ಹಲವು ಉತ್ತಮ ವಿದ್ಯಾರ್ಥಿಗಳನ್ನು ರೂಪಿಸಿದ ಕೀರ್ತಿಗೆ ಪಾತ್ರರು ಶ್ರೀ ಬೆಳೆಗೆರೆ ಕೃಷ್ಣಶಾಸ್ತ್ರಿ ಅವರು.
Categories
ಶ್ರೀ ಬೆಳಗೆರೆ ಕೃಷ್ಣಶಾಸ್ತ್ರಿ
