Categories
ರಾಜ್ಯೋತ್ಸವ 2016 ರಾಜ್ಯೋತ್ಸವ ಪ್ರಶಸ್ತಿ ಸಂಕೀರ್ಣ

ಆರ್. ಜೈಪ್ರಸಾದ್

ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಹುದ್ದೆಯಿಂದ ಪದೋನ್ನತಿ ಪಡೆದು ರಾಷ್ಟ್ರೀಯ ಹೆದ್ದಾರಿ ಪ್ರಧಾನ ಎಂಜಿನಿಯರ್ ಆಗಿ ಹುದ್ದೆ ನಿರ್ವಹಿಸಿದ ಹೆಗ್ಗಳಿಕೆ ಇರುವ ಆರ್. ಜೈಪ್ರಸಾದ್ ಅವರು ನಾಡಿನ ಹಲವಾರು ಪ್ರಮುಖ ರಸ್ತೆಗಳ ವಿನ್ಯಾಸ ಮಾಡುವಲ್ಲಿ ಸಕ್ರಿಯರಾಗಿ ಕೆಲಸ ಮಾಡಿದ್ದಾರೆ.
ಏಷಿಯನ್ ಅಭಿವೃದ್ಧಿ ಬ್ಯಾಂಕ್ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸಾರಿಗೆ ಸಚಿವಾಲಯದೊಂದಿಗೆ ಯೋಜನಾ ವರದಿಗಳ ತಯಾರಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಇವರು ರಸ್ತೆ, ಬಂದರು ಹಾಗೂ ಹಲವಾರು ಕಟ್ಟಡಗಳ ನಿರ್ಮಾಣ ಕಾರ್ಯದಲ್ಲಿ ದುಡಿದಿದ್ದಾರೆ.
ಸರ್ಕಾರದ ಹಲವು ಸಂಸ್ಥೆಗಳಲ್ಲಿ ತಾಂತ್ರಿಕ ಸಲಹೆಗಾರರಾಗಿ ಕೆಲಸ ಮಾಡುತ್ತಿರುವ ಆರ್.ಜೈಪ್ರಸಾದ್ ಅವರು ಬೆಂಗಳೂರು ಮಹಾನಗರಪಾಲಿಕೆಯ ತಾಂತ್ರಿಕ ಯೋಜನೆಗಳನ್ನು ಕೈಗೊಳ್ಳಲು ಶ್ರಮ ವಹಿಸಿದ್ದ ಇವರು ಹಲವಾರು ಮುದ್ರಿತ ತಾಂತ್ರಿಕ ಬರೆಹಗಳನ್ನು ಬರೆದಿದ್ದಾರೆ. ಇವರಿಗೆ ಸರ್.ಎಂ.ವಿಶ್ವೇಶ್ವರಯ್ಯ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳು ಲಭಿಸಿವೆ.