Categories
ಬಯಲಾಟ ರಾಜ್ಯೋತ್ಸವ 2017 ರಾಜ್ಯೋತ್ಸವ ಪ್ರಶಸ್ತಿ

ಈಶ್ವರವ್ವ ಹುಚ್ಚವ್ವ ಮಾದರ

ಬಯಲಾಟ ಕ್ಷೇತ್ರಕ್ಕಾಗಿ ತಮ್ಮ ಬದುಕನ್ನು ಮುಡುಪಾಗಿಟ್ಟಿರುವ ಈಶ್ವರವ್ವ ಹುಚ್ಚಪ್ಪ ಮಾದರ ಶ್ರೀ ಕೃಷ್ಣ ಪಾರಿಜಾತ, ಬಯಲಾಟಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತ ಬಂದವರು.

ನಾಲ್ಕೂವರೆ ದಶಕಗಳಿಂದ ಶ್ರೀಕೃಷ್ಣ ಪಾರಿಜಾತ ಬಯಲಾಟದಲ್ಲಿ ರುಕ್ಕಿಣಿ, ನಾರದ, ದೊರೆಸಾನಿ ಪಾತ್ರಗಳಿಗೆ ಜೀವ ತುಂಬುತ್ತಿರುವ ಈಶ್ವರವ್ವ ಅವರು ಕರ್ನಾಟಕ ಹಾಗೂ ಮಹಾರಾಷ್ಟ್ರಗಳಲ್ಲಿ ಪ್ರದರ್ಶಿಸಿರುವ ಶ್ರೀಕೃಷ್ಣ ಪಾರಿಜಾತ ಪ್ರದರ್ಶನಗಳು ನಾಲ್ಕು ಸಾವಿರಕ್ಕೂ ಹೆಚ್ಚು.

ಹರಿಯಾಣ ಉತ್ಸವ, ಮೈಸೂರು ವಿಶ್ವಕನ್ನಡ ಸಮ್ಮೇಳನ, ಪಟ್ಟದಕಲ್ಲು ಉತ್ಸವ ಮೊದಲಾದ ಕಡೆಗಳಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸಿರುವ ಈಶ್ವರವ್ವ ಅವರಿಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ, ಅಖಿಲ ಭಾರತ ಜಾನಪದ ಸಮಾವೇಶ ಗೌರವ ಸೇರಿದಂತೆ ಅನೇಕ ಗೌರವ ಪುರಸ್ಕಾರಗಳು ಲಭಿಸಿವೆ.