Categories
ರಾಜ್ಯೋತ್ಸವ 2019 ರಾಜ್ಯೋತ್ಸವ ಪ್ರಶಸ್ತಿ ಶಿಕ್ಷಣ

ಎಸ್.ಆರ್. ಗುಂಜಾಳ

ಪ್ರಾಧ್ಯಾಪಕ, ಸಂಶೋಧಕ ಲೇಖಕ ಹಾಗೂ ಆಡಳಿತಗಾರರಾಗಿ ಡಾ.ಎಸ್‌.ಆರ್.ಗುಂಜಾಳ ಅವರದು ಶಿಕ್ಷಣ ಕ್ಷೇತ್ರದಲ್ಲಿ ಬಹುಮುಖಿ ಸಾಧನೆ. ಹೊಸತಲೆಮಾರಿಗೆ ಮಾದರಿಯಾದಂತಹ ವ್ಯಕ್ತಿತ್ವ.
ಧಾರವಾಡ ಜಿಲ್ಲೆಯ ಕೋಳಿವಾಡದವರಾದ ಡಾ. ಶಿವಪುತ್ರಪ್ಪ ರಾಯಪ್ಪ ಗುಂಜಾಳ್ ಹುಟ್ಟಿದ್ದು ೧೯೩೨ರ ಜೂನ್ ೨೫ರಂದು, ಅಕ್ಷರದಿಂದ ಅರಳಿದ ಪ್ರತಿಭೆ. ಸ್ನಾತಕೋತ್ತರ ಪದವಿ, ದೆಹಲಿ ವಿ.ವಿ ಯಿಂದ ಎಂ.ಲಿಟ್.ಎಸ್.ಸಿ, ಪಿಎಚ್‌ಡಿ ಪದವೀಧರರು, ಗ್ರಂಥಪಾಲ, ಡೆಪ್ಯೂಟಿ ಗ್ರಂಥಪಾಲ, ಪ್ರಾಧ್ಯಾಪಕ, ಮುಖ್ಯಸ್ಥರಾಗಿ ದುಡಿದವರು. ಅಧ್ಯಾಪನದ ಜೊತೆಗೆ ಸಂಶೋಧನೆ-ಬರವಣಿಗೆ, ಗ್ರಂಥಾಲಯ ವಿಜ್ಞಾನ ಗ್ರಂಥಗಳೂ ಸೇರಿದಂತೆ ೭೨ ಕೃತಿಗಳು, ೧೫೦ ಲೇಖನಗಳ ರಚನಕಾರರು.೨೫ ರಾಷ್ಟ್ರೀಯ-ಪ್ರಾಂತೀಯ ಸಮ್ಮೇಳನಗಳಲ್ಲಿ ಭಾಗವಹಿಸಿದ ಹಿರಿಮೆ, ೨೦ ವಿ.ವಿ ಗಳ ಅಭ್ಯಾಸ ಮಂಡಳಿಯ ಸದಸ್ಯರಾಗಿ, ಗುಲ್ಬರ್ಗಾ ವಿ.ವಿ ಸಮಾಜವಿಜ್ಞಾನ ವಿಭಾಗದ ಡೀನ್ ಆಗಿ ಶೈಕ್ಷಣಿಕ ಸೇವೆ. ಕನ್ನಡ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ, ಶರಣ ಸಾಹಿತ್ಯ ಪ್ರಶಸ್ತಿ, ಸಾಹಿತ್ಯಶ್ರೀ ಪ್ರಶಸ್ತಿ ಸೇರಿ ಹತ್ತಾರು ಗೌರವಗಳಿಂದ ಭೂಷಿತರಾದ ಗುಂಜಾಳ್ ನಿಯತಕಾಲಿಕೆಗಳ ಸಂಪಾದಕರು, ಪಿಎಚ್‌ ವಿದ್ಯಾರ್ಥಿಗಳ ಮಾರ್ಗದರ್ಶಕರಾಗಿಯೂ ಸೇವೆಗೈದ ಸಾಧಕಮಣಿ.