Categories
ಕೃಷಿ ಪರಿಸರ ರಾಜ್ಯೋತ್ಸವ 2017 ರಾಜ್ಯೋತ್ಸವ ಪ್ರಶಸ್ತಿ

ಎಸ್.ಎಂ. ಕೃಷ್ಣಪ್ಪ

ಸಾಂಪ್ರದಾಯಿಕ ತೋಟದ ಬೆಳೆಗಳನ್ನು ಬೆಳೆಯುವ ಮನೆತನದಲ್ಲಿ ಜನಿಸಿದ ಎಸ್.ಎಂ.ಕೃಷ್ಣಪ್ಪ ಅವರು ಇಂಜಿನಿಯರಿಂಗ್ ಶಿಕ್ಷಣ ಪಡೆದ ನಂತರ ಪಾರಂಪರಿಕ ತೋಟಗಾರಿಕೆ ವೃತ್ತಿಯನ್ನು ಕೈಗೊಂಡವರು.

ಉತ್ಕೃಷ್ಟವಾದ ನರ್ಸರಿಗಳನ್ನು ಸ್ಥಾಪಿಸಿ ಬೆಳೆಸುವ ಮೂಲಕ ಹೆಸರಾಗಿರುವ ಕೃಷ್ಣಪ್ಪ ಅಂಗಾಂಶ ಕಸಿ ತಂತ್ರಜ್ಞಾನ ಹಾಗು ಸಾಂಪ್ರದಾಯಿಕ ತೋಟಗಾರಿಕೆ ಎರಡರಲ್ಲೂ ಯಶ ಸಾಧಿಸಿ ವಿದೇಶಗಳಿಗೆ ಸಸಿಗಳನ್ನು ರಫ್ತು ಮಾಡುತ್ತಿದ್ದಾರೆ.

ಲಾಲ್‌ಬಾಗಿನಲ್ಲಿ ವೈವಿಧ್ಯಮಯವಾದ ಹೂವುಗಳ ಪ್ರದರ್ಶನವನ್ನು ಏರ್ಪಡಿಸುತ್ತಿರುವ ಕೃಷ್ಣಪ್ಪ ಅವರು ತೋಟಗಾರಿಕೆ ಬೆಳೆಗಾರರಿಗೆ ಉಪಯುಕ್ತ ಮಾಹಿತಿಗಳನ್ನು ಒದಗಿಸುವ ನರ್ಸರಿಮೆನ್ಸ್ ಮ್ಯಾಗಜಿನ್ ಸಂಪಾದಕರಾಗಿದ್ದು, ನರ್ಸರಿಮನ್ ಸಂಘದ ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.