Categories
ರಾಜ್ಯೋತ್ಸವ 2019 ರಾಜ್ಯೋತ್ಸವ ಪ್ರಶಸ್ತಿ ಸಂಕೀರ್ಣ

ಎಸ್.ಟಿ. ಶಾಂತಗಂಗಾಧರ

ಸಮಾಜಸೇವೆಯಲ್ಲೇ ದಿವ್ಯಾನುಭೂತಿ ಅನುಭವಿಸಿದ ವಿರಳ ಸೇವಾನಿರತರಲ್ಲಿ ಶಾಂತಗಂಗಾಧರ್ ಸಹ ಒಬ್ಬರು. ಸಾಹಿತ್ಯ-ಸಂಸ್ಕೃತಿ-ಸಮಾಜಸೇವೆ-ಕನ್ನಡ ಸೇವೆ. ಹೀಗೆ ಬಹುರಂಗದಲ್ಲಿ ಬಹುಶ್ರುತ ಸಾಧನೆ ಅವರದ್ದು.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ನವಿಲೇಹಾಳುವಿನಲ್ಲಿ ಜನಿಸಿದ ಶಾಂತ ಗಂಗಾಧರ ವಿದ್ಯಾರ್ಥಿ ದೆಸೆಯಲ್ಲೇ ಚರ್ಚಾ ಸ್ಪರ್ಧೆ-ಪ್ರಬಂಧ ಸ್ಪರ್ಧೆಗಳಲ್ಲಿ ಪಾರಿತೋಷಕಗಳನ್ನು ಗೆದ್ದವರು. ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದವರು.ಸಿಂಡಿಕೇಟ್ ಬ್ಯಾಂಕ್ ಶಿರಾಳಕೊಪ್ಪ ಶಾಖೆಯಲ್ಲಿ ನೌಕರಿಗೆ ಸೇರ್ಪಡೆ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡದಲ್ಲೇ ವ್ಯವಹರಿಸಿದ ದಾಖಲೆ. ಬ್ಯಾಂಕಿಂಗ್ ಕನ್ನಡ ಶಬ್ದಕೋಶದಲ್ಲಿ ಕೊಡುಗೆಯಿತ್ತವರು. ಹವ್ಯಾಸಿ ರಂಗಕಲಾವಿದನಾಗಿ ಸೈ ಎನಿಸಿಕೊಂಡವರು. ಧಾರಾವಾಹಿಯಲ್ಲೂ ನಟಿಸಿ ಹಿರಿಮೆ ಮೆರೆದವರು.ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಹಲವು ಚಳವಳಿಗಳಲ್ಲೂ ಸಕ್ರಿಯರಾಗಿದ್ದ ಶಾಂತಗಂಗಾಧರ ಶಿಕಾರಿಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ, ದಾವಣಗೆರೆ ಜಿಲ್ಲಾ ಕಸಾಪ ಕಾರ್ಯದರ್ಶಿಯಾಗಿ ಸಾರ್ಥಕ ಸೇವೆ. ಕವನ, ಲೇಖನಗಳು ಹಲವು ಪತ್ರಿಕೆಗಳಲ್ಲಿ ಪ್ರಕಟ. ಸಾಹಿತ್ಯ-ಸಾಂಸ್ಕೃತಿಕ ಮತ್ತು ಸಮಾಜಸೇವಾ ಕಾರ್ಯಕ್ರಮಗಳಿಗೆ ಸದಾ ಬೆನ್ನೆಲುಬಾಗಿ ಕ್ರಿಯಾಶೀಲರಾಗಿರುವ ಶಾಂತಗಂಗಾಧರ್ ಚನ್ನಗಿರಿ ತಾಲ್ಲೂಕು ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗಳಿಗೂ ಭಾಜನರು.