Categories
ರಾಜ್ಯೋತ್ಸವ 2015 ರಾಜ್ಯೋತ್ಸವ ಪ್ರಶಸ್ತಿ ಸಂಕೀರ್ಣ

ಎಸ್. ತಿಪ್ಪೇಸ್ವಾಮಿ

ಕರ್ನಾಟಕದ ವನ್ಯಜೀವಿ ಛಾಯಾಗ್ರಾಹಕರಲ್ಲಿ ಒಬ್ಬರಾದ ಎಸ್.ತಿಪ್ಪೇಸ್ವಾಮಿ ದೇಶ ವಿದೇಶಗಳ ಅನೇಕ ಛಾಯಾಚಿತ್ರ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕನ್ನಡ ಚಿತ್ರಗಳ ಕ್ಯಾಮೆರಾಮನ್ ಆಗಿಯೂ ಸೇವೆ ಸಲ್ಲಿಸಿರುವ ತಿಪ್ಪೇಸ್ವಾಮಿ ಅವರು ಅನೇಕ ಸಾಕ್ಷ್ಯಚಿತ್ರಗಳನ್ನು ತಯಾರಿಸಿದ್ದಾರೆ. ಪತ್ರಿಕೋದ್ಯಮ ಹಾಗೂ ಸಂವಹನ ಮಾಧ್ಯಮದ ವಿದ್ಯಾರ್ಥಿಗಳಿಗೆ ಗೌರವ ಉಪನ್ಯಾಸಕರಾಗಿ ಕೆಲಸ ಮಾಡಿರುವ ಇವರು ಸಿನಿಮಾ ಪತ್ರಿಕೋದ್ಯಮದಲ್ಲಿಯೂ ಛಾಯಾಗ್ರಾಹಕ ಹಾಗೂ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಪತ್ರಕರ್ತರಾಗಿ ೨೫ ವರ್ಷಗಳಿಂದ ನಾಡಿನ ಹಲವಾರು ಪತ್ರಿಕೆಗಳಿಗೆ ಹಾಗೂ ಚೆನೈನಿಂದ ಪ್ರಕಟವಾಗುತ್ತಿದ್ದ ಸಿನಿಮಾ ಹಾಗೂ ಮಹಿಳಾ ಮಾಸಪತ್ರಿಕೆಗಳಿಗೂ ಇವರು ಛಾಯಾಚಿತ್ರಗಳನ್ನು ಒದಗಿಸಿದ್ದಾರೆ.