Categories
ಚಿತ್ರಕಲೆ ರಾಜ್ಯೋತ್ಸವ 2015 ರಾಜ್ಯೋತ್ಸವ ಪ್ರಶಸ್ತಿ

ಕಮಲಾಕ್ಷಿ ಎಂ.ಜೆ.

ಚಿಕ್ಕ ವಯಸ್ಸಿನಿಂದಲೇ ಆಸಕ್ತಿ ಬೆಳೆಸಿಕೊಂಡು ಕಲಾಭ್ಯಾಸ ಮಾಡಿ ಚಿತ್ರಕಲೆಯಲ್ಲಿ ಡಿಪ್ಲೋಮಾ ಪದವಿ, ಬರೋಡಾದಲ್ಲಿ ಹೆಚ್ಚಿನ ವಿದ್ಯಾಭ್ಯಾಸ ಮಾಡಿದ ಎಂ.ಜೆ.ಕಮಲಾಕ್ಷಿ ಅವರು ಚಿತ್ರಕಲಾ ಪರಿಷತ್ತಿನ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದಾರೆ.
ಮೈಸೂರು ಸಾಂಪ್ರದಾಯಿಕ ಕಲೆ ತೊಗಲು ಗೊಂಬೆಗಳ ಬಗ್ಗೆ ವಿಶೇಷ ಅಧ್ಯಯನ ನಡೆಸಿರುವ ಹಿರಿಯ ಚಿತ್ರ ಕಲಾವಿದೆ ಕಮಲಾಕ್ಷಿ ಅವರು ಕಲಾಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ, ನಾಡಿನ ಪ್ರಸಿದ್ಧ ಕಲಾ ಕೇಂದ್ರವಾದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಕಾರ್ಯದರ್ಶಿಗಳಾಗಿ ನಾಲ್ಕು ದಶಕಗಳ ಕಾಲ ಕೆಲಸ ಮಾಡಿರುವ ಇವರು ಗೃಹ ವಿಜ್ಞಾನದಲ್ಲಿ ಪದವೀಧರರು.
ಸಾಂಪ್ರದಾಯಿಕ ಕಲೆಯನ್ನು ಸಮಕಾಲೀನ ಕಲೆಯೊಂದಿಗೆ ಮೇಲೈಸುವ ಕೃತಿಗಳನ್ನು ಅನೇಕ ಮಾಧ್ಯಮಗಳಲ್ಲಿ ರಚಿಸಿರುವ ಕಮಲಾಕ್ಷಿ ಅವರು ಶ್ರವಣಬೆಳಗೊಳದ ಜೈನ ಮಠದ ಭಿತ್ತಿ ಚಿತ್ರಗಳ ಪ್ರತಿಕೃತಿಗಳನ್ನು ಮಾಡಿಸುವಲ್ಲಿ ಮೌಲ್ಯಯುತ ಕೆಲಸ ಮಾಡಿದ್ದಾರೆ.