Categories
ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ ಸಂಘ-ಸಂಸ್ಥೆ

ಕರ್ನಾಟಕ ಹಿಮೋಫೀಲಿಯಾ ಸೊಸೈಟಿ

ಹಿಮೋಫೀಲಿಯಾ ಕಾಯಿಲೆಯಿಂದ ಬಳಲುತ್ತಿರುವವರ ಕ್ಷೇಮಾಭಿವೃದ್ಧಿಗಾಗಿ ೧೯೯೦ ರಲ್ಲಿ ಕರ್ನಾಟಕ ಹಿಮೋಫೀಲಿಯಾ ಸೊಸೈಟಿ ಆರಂಭಗೊಂಡು ಎರಡೂವರೆ ದಶಕಗಳು ಕಳೆದಿವೆ. ಹಿಮೋಫೀಲಿಯ ಕಾಯಿಲೆಯನ್ನು ಗುಣಪಡಿಸದೇ ಹೋದರೆ ಶಾಶ್ವತ ಊನಕ್ಕೆ ತುತ್ತಾಗುವ ಅಪಾಯವನ್ನು ತಪ್ಪಿಸುವ ಸಲುವಾಗಿ ದಾವಣಗೆರೆ ಜಿಲ್ಲೆಯಲ್ಲಿ ಸ್ಥಾಪಿತವಾಯಿತು.
ಮಾನವೀಯ ನೆಲೆಯಲ್ಲಿ ಶುರುವಾದ ಹಿಮೊಫೀಲಿಯ ಸೊಸೈಟಿ, ಬಡವರಿಗೆ ಉಚಿತ ಚಿಕಿತ್ಸೆ ಮತ್ತು ಆರೈಕೆಯನ್ನು ನೀಡುತ್ತಿದೆ. ಸಾವಿರಾರು ಜನ ಹಿಮೋಫೀಲಿಯಾಕ್ಕೆ ತುತ್ತಾದವರು ಇಲ್ಲಿ ಗುಣವಾಗಿ ಸಂತಸದ ಬದುಕನ್ನ ನಡೆಸುತ್ತಿದ್ದಾರೆ. ನಿಸ್ವಾರ್ಥ ಮತ್ತು ನಿರಪೇಕ್ಷೆಯಿಂದ ನಡೆಯುತ್ತಿರುವ ಈ ಸಂಸ್ಥೆಗೆ ಸಾರ್ವಜನಿಕರು, ದಾನಿಗಳು ಹಾಗೂ ಸಂಘ ಸಂಸ್ಥೆಗಳಿಂದ ಬೆಂಬಲ ಸಿಗುತ್ತಿದೆ. ಸೊಸೈಟಿಗಾಗಿ ಸಹಾಯಾರ್ಥ ಪ್ರದರ್ಶನಗಳನ್ನು ಶ್ರೀ.ಎಸ್.ಪಿ.ಬಾಲಸುಬ್ರಹ್ಮಣ್ಯಂ, ಶ್ರೀಮತಿ ಸಂಗೀತಾಕಟ್ಟ, ಶ್ರೀಮತಿ ಉಷಾ ಉತ್ತುಪ್, ಮುಂತಾದವರು ನೀಡಿ ಮಾನವೀಯತೆ ಮೆರೆದಿದ್ದಾರೆ.