Categories
ಕುವೆಂಪು ವ್ಯಕ್ತಿ ಪರಿಚಯ

ವ್ಯಕ್ತಿ ಪರಿಚಯ – ಕುವೆಂಪು

ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪನವರ ಕಾವ್ಯನಾಮ “ಕುವೆಂಪು”.

ಜನನ: ಕುವೆಂಪುರವರು ೧೯೦೪ ರ ಡಿಸೆಂಬರ್ ೨೯ ರಂದು ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿ ಯಲ್ಲಿ ಜನಿಸಿದರು .ತಂದೆ ವೆಂಕಟಪ್ಪ ಗೌಡರು, ತಾಯಿ ಸೀತಮ್ಮ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ತೀರ್ಥಹಳ್ಳಿ ಯಲ್ಲಿ ಆರಂಭಿಸಿದ ಕುವೆಂಪುರವರು ನಂತರ ಪ್ರೌಢಶಾಲೆಯಿಂದ ಎಂ.ಎ ಪದವಿಯವರೆಗೂ ಮೈಸೂರಿನಲ್ಲಿ ಓದಿದರು. ನಂತರ ೧೯೨೯ ರಲ್ಲಿ ಪ್ರಾಧ್ಯಾಪಕರಾಗಿ ಮೈಸೂರಿನ ‘ಮಹಾರಾಜಾ’ ಕಾಲೇಜನ್ನು ಸೇರಿದ ಇವರು, ೧೯೫೫ರಲ್ಲಿ ಅದೇ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಂತರ ಉಪಕುಲಪತಿಯಾಗಿ ನಿವೃತ್ತರಾದರು. ವಿಶ್ವವಿದ್ಯಾಲಯವೊಂದರ ಕುಲಪತಿಯಾದ ಮೊದಲ ಕನ್ನಡಿಗ ಕುವೆಂಪುರವರು. ಇವರು ಮೈಸೂರಿನ ಒಂಟಿಕೊಪ್ಪಲುವಿನಲ್ಲಿರುವ “ಉದಯರವಿ”ಯಲ್ಲಿ ವಾಸಿಸುತ್ತಿದ್ದರು. ಇವರ ಹೆಂಡತಿಯ ಹೆಸರು ಹೇಮಾವತಿ ಮತ್ತು ಇವರಿಗೆ ನಾಲ್ಕು ಜನ ಮಕ್ಕಳು (ಪೂರ್ಣಚಂದ್ರ ತೇಜಸ್ವಿ, ಕೋಕೀಲೋದಯ ಚೈತ್ರ, ಇಂದುಕಲಾ, ತಾರಿಣಿ ಚಿದಾನಂದ).

ಮೊದಲ ಹಂತ: ಎಸ್.ಎಸ್.ಎಲ್.ಸಿ ಓದುವಾಗಲೇ ಕುವೆಂಪುರವರು ಬರೆದಿದ್ದ “ಬಿಗಿನರ್ಸ್ ನ್ಯೂಸ್” ಎಂಬ ಇಂಗ್ಲೀಷ್ ಕವನಸಂಕಲನ ಭಾರತ ಭೇಟಿಗೆ ಬಂದಿದ್ದ ಐರಿಶ್ ಕವಿ ಜೆ.ಎಚ್.ಕಸಿನ್ಸ್ ರ ಮೆಚ್ಚುಗೆಗೆ ಪಾತ್ರವಾಗಿತ್ತು. ನಂತರ ಅವರ ಸಲಹೆಯಂತೆ ಕನ್ನಡದಲ್ಲಿ ಬರೆಯಲಾರಂಭಿಸಿದ ಕುವೆಂಪು ರವರು ಬರೆದ ಮೊದಲ ಕನ್ನಡ ಕವನ ಸಂಕಲನ “ಅಮಲನಕಥೆ”. ಚಿಕ್ಕಂದಿನಿಂದಲೇ ಮಲೆನಾಡಿನ ಪರಿಸರದಲ್ಲಿ ಬೆಳೆದ ಕುವೆಂಪುರವರಿಗೆ ಅಪಾರವಾದ ಪರಿಸರ ಪ್ರೇಮ. ಅವರ ಪರಿಸರ ಪ್ರೀತಿಯೇ ಅವರ ಕಾವ್ಯದಲ್ಲಿ ಜೀವಂತವಾಗಿ ಮೇಳೈಸಿದೆ. ಜತೆಗೆ ನಾಡು ಕಂಡ ಧೀಮಂತರಾದ ಶ್ರೀ ಟಿ.ಎಸ್. ವೆಂಕಣ್ಣಯ್ಯ, ಬಿ.ಎಂ.ಶ್ರೀ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿ ಯವರ ಒಡನಾಟ, ಮಾರ್ಗದರ್ಶನಗಳು ಅವರ ಸಾಹಿತ್ಯವನ್ನು ಶ್ರೀಮಂತಗೊಳಿಸಿದವು. ೧೯೨೫ ರಲ್ಲಿ ಪ್ರಕಟವಾದ ಕುವೆಂಪುರವರ “ಬೊಮ್ಮನಹಳ್ಳಿ ಕಿಂದರಿಜೋಗಿ” ನಾಡಿನಾದ್ಯಂತ ಮಕ್ಕಳ ಬಾಯಲ್ಲಿ ನಲಿದಾಡಿತು. ಸೆಂಟ್ರಲ್ ಕಾಲೇಜು ವಿದ್ಯಾರ್ಥಿ ಕವಿ ಸಮ್ಮೇಳನದ ಅಧ್ಯಕ್ಷ ಪದವಿಯೂ ಇವರನ್ನು ಅರಸಿ ಬಂತು.

ಬೆಳವಣಿಗೆ: ಕುವೆಂಪು ಅವರು ಬರೆದ ಎರಡು ಕಾದಂಬರಿಗಳಾದ “ಕಾನೂರು ಸುಬ್ಬಮ್ಮ ಹೆಗ್ಗಡತಿ” ಮತ್ತು “ಮಲೆಗಳಲ್ಲಿ ಮದುಮಗಳು” ಭಾರತೀಯ ಸಾಹಿತ್ಯ ಪ್ರಪಂಚದಲ್ಲೇ ಶ್ರೇಷ್ಠ ಕೃತಿಗಳೆಂಬ ಪ್ರಶಂಸೆಗೆ ಪಾತ್ರವಾಗಿವೆ. ಕನ್ನಡಕ್ಕೆ ಮೊದಲ ಜ್ಞಾನಪೀಠವನ್ನು ತಂದುಕೂಟ್ಟ ಹಿರಿಮೆಯನ್ನು ಹೊಂದಿದ ಇವರ ” ಶ್ರೀ ರಾಮಾಯಣದರ್ಶನಂ” ಮಹಾಕಾವ್ಯ ಸಂಸ್ಕೃತ ಮತ್ತು ಹಿಂದಿ ಭಾಷೆಗೆ ಅನುವಾದಗೊಂಡಿದೆ. ಇವರು “ಬೆರಳ್ಗೆ ಕೊರಳ್”,”ಶೂದ್ರ ತಪಸ್ವಿ”,”ಸ್ಮಶಾನ ಕುರುಕ್ಷೇತ್ರಂ”, “ರಕ್ತಾಕ್ಷಿ”,”ಜಲಗಾರ” ಮೊದಲಾದ ನಾಟಕಗಳನ್ನು ಬರೆದಿದ್ದಾರೆ. ಜೊತೆಗೆ” ಕೊಳಲು”,”ಅಗ್ನಿಹಂಸ”,”ಅನಿಕೇತನ”,”ಅನುತ್ತರಾ”, “ಇಕ್ಷು ಗಂಗೋತ್ರಿ”, “ಕಥನ ಕವನಗಳು”,” ಕಲಾಸುಂದರಿ”, “ಕಿಂಕಿಣಿ”, “ಕೃತ್ತಿಕೆ”, “ಜೇನಾಗುವ”, “ನವಿಲು”, “ಪಕ್ಷಿಕಾಶಿ”, “ಚಿತ್ರಾಂಗದಾ” ಮೊದಲಾದ ಕವನಸಂಕಲನಗಳು, “ರಾಮಕೃಷ್ಣ ಪರಮಹಂಸ”, “ಸ್ವಾಮಿ ವಿವೇಕಾನಂದ” ಜೀವನಚರಿತ್ರೆಗಳನ್ನೂ ಇವರು ಬರೆದಿದ್ದಾರೆ.
“ನೆನಪಿನ ದೋಣಿಯಲ್ಲಿ” ಕುವೆಂಪುರವರ ಆತ್ಮಕಥೆ.

ಪ್ರಶಸ್ತಿ, ಪುರಸ್ಕಾರ, ಬಿರುದು:
೧೯೫೫ ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
೧೯೫೮ ರಲ್ಲಿ ಧಾರವಾಡದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ
೧೯೫೮ ರಲ್ಲಿ ಪದ್ಮಭೂಷಣ
೧೯೬೪ ಕರ್ನಾಟಕ ಸರ್ಕಾರದಿಂದ ರಾಷ್ಟ್ರಕವಿ
೧೯೬೮ ರಲ್ಲಿ ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಭಾರತೀಯ ಜ್ಞಾನಪೀಠ ಪ್ರಶಸ್ತಿ

ಮೂರು(೩) ವಿಶ್ವವಿದ್ಯಾನಿಲಯಗಳ ಗೌರವ ಡಿ.ಲಿಟ್ ಪ್ರಶಸ್ತಿ
೧೯೮೭ ರಲ್ಲಿ ಪಂಪ ಪ್ರಶಸ್ತಿ
೧೯೮೯ರಲ್ಲಿ ಪದ್ಮವಿಭೂಷಣ
೧೯೯೨ ಕರ್ನಾಟಕ ರತ್ನ ಪ್ರಶಸ್ತಿ
ಕುವೆಂಪುರವರು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆ ಅಪಾರ. ಇವರು ೧೯೫೭ರಲ್ಲಿ ಧಾರವಾಡದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ೧೯೫೫ ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದರು. ಇವರ ಶ್ರೀ ರಾಮಾಯಣ ದರ್ಶನಂ ಕೃತಿಯು ಕನ್ನಡಕ್ಕೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿಯನ್ನು ದೊರಕಿಸಿ ಕೊಟ್ಟಿತು. ಭಾರತ ಸರ್ಕಾರದ ಪದ್ಮವಿಭೂಷಣದಿಂದಲೂ ಪುರಸ್ಕೃತಗೊಂಡ ಇವರು ‘ಜೈ ಭಾರತ ಜನನಿಯ ತನುಜಾತೆ…’ ಕನ್ನಡ ನಾಡ ಗೀತೆಯನ್ನು ರಚಿಸಿದ ಮೇರು ಕವಿ. “ಅಭಿನವ ವಾಲ್ಮೀಕಿ” ಎಂದೇ ಜನಮಾನಸದಲ್ಲಿ ಪ್ರಸಿದ್ಧರಾದ ಕುವೆಂಪುರವರು ೧೯೯೪ ನವೆಂಬರ್ ೧೧ರಂದು ಮೈಸೂರಿನ ತಮ್ಮ ನಿವಾಸ ಉದಯರವಿಯಲ್ಲಿ ನಿಧನರಾದರು.

ಕುವೆಂಪು ಕನ್ನಡ ಅಧ್ಯಯನ ಕೇಂದ್ರ(ಮೈಸೂರು ವಿಶ್ವ ವಿದ್ಯಾನಿಲಯ),ಕುವೆಂಪು ವಿಶ್ವವಿದ್ಯಾಲಯಗಳು ಕುವೆಂಪು ಅವರ ನೆನಪನ್ನು ಉಳಿಸಿವೆ.

ಕೃತಿಗಳು

ಮಹಾಕಾವ್ಯ

ಖಂಡಕಾವ್ಯಗಳು

ಕವನ ಸಂಕಲನಗಳು

ಕಥಾ ಸಂಕಲನ

ಕಾದಂಬರಿಗಳು

ನಾಟಕಗಳು

ಪ್ರಬಂಧ

ವಿಮರ್ಶೆ

ಆತ್ಮಕಥೆ

ಜೀವನ ಚರಿತ್ರೆಗಳು

ಅನುವಾದ

  • ಗುರುವಿನೊಡನೆ ದೇವರಡಿಗೆ (ಭಾಗ 1, 2) (1954)
  • ಕೊಲಂಬೋ ಇಂದ ಆಲ್ಮೋರಕೆ

ಭಾಷಣ-ಲೇಖನ

ಶಿಶು ಸಾಹಿತ್ಯ

ಇತರೆ

ಆಯ್ದ ಸಂಕಲನಗಳು

  • ಕನ್ನಡ ಡಿಂಡಿಮ (1968)
  • ಕಬ್ಬಿಗನ ಕೈಬುಟ್ಟಿ (1973)
  • ಪ್ರಾರ್ಥನಾ ಗೀತಾಂಜಲಿ (1972)

 

ಮಂತ್ರ ಮಾಂಗಲ್ಯ : ವಿವಾಹ ಸಂಹಿತೆ