Categories
ರಾಜ್ಯೋತ್ಸವ 2019 ರಾಜ್ಯೋತ್ಸವ ಪ್ರಶಸ್ತಿ ಹೊರನಾಡು

ಗಂಗಾಧರ ಬೇವಿನಕೊಪ್ಪ

ತಾಂತ್ರಿಕ ತಜ್ಞ ಉದ್ಯಮಿ, ಚತುರ ಸಂಘಟನಾಕಾರರಾದ ಗಂಗಾಧರ ಬೇವಿನಕೊಪ್ಪ ಅವರು ‘ಗಾಂಧಿ’ ಎಂಬ ವಿಶೇಷ ನಾಮದಿಂದಲೇ ಚಿರಪರಿಚಿತರು. ವಿದೇಶದಲ್ಲಿ ನಾಡಿನ ಕೀರ್ತಿ, ಧೀಶಕ್ತಿಯನ್ನು ಬೆಳಗಿದ ಹೆಮ್ಮೆಯ ಹೊರನಾಡು ಕನ್ನಡಿಗ,
ಗಂಗಾಧರ ಬೇವಿನಕೊಪ್ಪ ಗಡಿನಾಡಿನ ಪ್ರತಿಭೆ, ಬೆಳಗಾವಿ ಜಿಲ್ಲೆಯ ಸಂಗೊಳ್ಳಿ ಬಳಿಯ ಕೆಂಗನೂರು ಹುಟ್ಟೂರು. ಬಾಲ್ಯದಿಂದಲೂ ಪ್ರಖರ ಬುದ್ಧಿವಂತಿಕೆ. ಆಸ್ಟ್ರೇಲಿಯಾದ ಡೇಕಿನ್ ವಿ.ವಿ ಯ ಬಿ.ಟೆಕ್ ಪದವೀಧರರು. ಟೂಲ್ ಅಂಡ್ ಡೈ ಮೇಕಿಂಗ್‌ನಲ್ಲಿ ಡಿಪ್ಲೋಮಾ ಪಡೆದವರು. ತಾಂತ್ರಿಕ ಪರಿಣಿತಿ-ಅನುಭವದ ಆಧಾರದ ಮೇರೆಗೆ ಆಸ್ಟ್ರೇಲಿಯಾದ ಮೇಲ್ಬರ್ನನಲ್ಲಿ ದುಡಿಮೆ, ೧೯೯೪ರಲ್ಲಿ ಸ್ವಂತ ಉದ್ದಿಮೆ ಕೊಪ್ಪ ಇಂಜಿನಿಯರಿಂಗ್‌ ಸಂಸ್ಥೆ ಸ್ಥಾಪನೆ-ಯಶಸ್ಸು. ಆನಂತರ ಮೌಲ್ಡಿಂಗ್ ವಸ್ತುಗಳನ್ನು ಉತ್ಪಾದಿಸುವ ಬೆವ್ ಪ್ಲಾಸ್ಟಿಕ್ಸ್ ಸ್ಥಾಪಿಸಿ ಉನ್ನತ ಸಾಧನೆ. ಅನಿವಾಸಿ ಭಾರತೀಯರು ನೆಲೆನಿಲ್ಲಲು ನೆರವಾದ ಸಹೃದಯಿ. ಮೇಲ್ಬರ್ನ್ ಕನ್ನಡ ಸಂಘ, ವಿವೇಕಾನಂದ ಯೋಗ ಕೇಂದ್ರ, ಬಸವ ಸಮಿತಿ, ರೋಟರಿ ಕ್ಲಬ್‌ ಮತ್ತಿತರ ಹಲವು ಸಾಮಾಜಿಕ, ವೃತ್ತಿಪರ, ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಸಂಘಟಕರಾಗಿ ಪರಿಶ್ರಮ-ಸಾರ್ಥಕ ಸೇವೆ ಸಲ್ಲಿಸಿದ ಅದಮ್ಯ ಉತ್ಸಾಹದ ಮಾದರಿ ತಂತ್ರಜ್ಞ ಉದ್ಯಮಿ.