Categories
ರಾಜ್ಯೋತ್ಸವ 2016 ರಾಜ್ಯೋತ್ಸವ ಪ್ರಶಸ್ತಿ ಸಿನಿಮಾ

ಜೆ.ಕೆ. ಶ್ರೀನಿವಾಸ ಮೂರ್ತಿ

ರಂಗಭೂಮಿಯಲ್ಲಿ ಹಲವಾರು ಪ್ರಭಾವಶಾಲಿ ಪೌರಾಣಿಕ ಪಾತ್ರಗಳನ್ನು ನಿರ್ವಹಿಸುವ ಮೂಲಕ ಖ್ಯಾತರಾಗಿದ್ದ ಜೆ.ಕೆ. ಶ್ರೀನಿವಾಸಮೂರ್ತಿ ಚಲನಚಿತ್ರ ರಂಗವನ್ನು ಪ್ರವೇಶ ಮಾಡಿದ್ದು ನಾಯಕನಟರಾಗಿ, ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯನವರ ಗರಡಿಯಲ್ಲಿ ಪಳಗಿದ ಶ್ರೀನಿವಾಸಮೂರ್ತಿ ಪೋಷಕ ಪಾತ್ರಗಳಲ್ಲಿ ಪ್ರೇಕ್ಷಕರನ್ನು ರಂಜಿಸಿದರು. ಕವಿರತ್ನ ಕಾಳಿದಾಸ ಚಿತ್ರದಲ್ಲಿ ಭೋಜರಾಜನ ಪಾತ್ರ ಅವರಿಗೆ ಸಾಕಷ್ಟು ಹೆಸರನ್ನು ತಂದುಕೊಟ್ಟಿತು.
ಕನ್ನಡದ ಬೇಡಿಕೆಯ ಪೋಷಕ ನಟರಾಗಿರುವ ಶ್ರೀನಿವಾಸಮೂರ್ತಿ ಅನೇಕ ಚಿತ್ರಗಳನ್ನು ನಿರ್ಮಿಸಿ ನಿರ್ದೇಶಿಸಿದ್ದಾರಲ್ಲದೆ ಕಿರುತೆರೆಯಲ್ಲಿಯೂ ಜನಪ್ರಿಯ ನಟರಾಗಿದ್ದಾರೆ. ಇವರಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯೂ ಸೇರಿದಂತೆ ಅನೇಕ ಪ್ರಶಸ್ತಿ ಗೌರವಗಳು ಲಭಿಸಿದೆ.