Categories
ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ ವೈದ್ಯಕೀಯ

ಡಾ. ಬಿ. ಅಂಬಣ್ಣ

ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿಯಲ್ಲಿರುವ ಡಾ. ಅಂಬಣ್ಣ, ತಮ್ಮ ಹುಟ್ಟೂರನ್ನು ಮರೆಯದೇ ಮರ೪ ೧೯೬೧ ರಲ್ಲಿ ಮರಿಯಮ್ಮನಹಳ್ಳಿಗೆ ಬರುವ ಮೂಲಕ ವೈದ್ಯರು ಹಳ್ಳಿಗಳಿಗೆ ಬರುವುದಿಲ್ಲ ಎಂಬ ಅಪವಾದವನ್ನು ಹುಸಿ ಮಾಡಿದವರು.

ಕಳೆದ ಐದು ದಶಕಗಳಿಂದ ನಿರಂತರವಾಗಿ ಮರಿಯಮ್ಮನ ಹಳ್ಳಿಯ ಸುತ್ತಮುತ್ತಲಿನ ೩೦ಕ್ಕೂ ಹೆಚ್ಚು ಗ್ರಾಮಗಳಿಗೆ ತೆರಳಿ ಔಷಧೋಪಚಾರ ಮಾಡುವ ಡಾ.ಅಂಬಣ್ಣ ಅವರು ಜನರ ಡಾಕ್ಟರ್ ಎಂದೇ ಜನಪ್ರಿಯ. ಪ್ರತಿದಿನ ೧೫೦ ಮಂದಿಗೆ ಚಿಕಿತ್ಸೆ ನೀಡುವ ಇವರು, ಇಲ್ಲಿಯವರೆಗೂ ಮೂರು ಲಕ್ಷಕ್ಕೂ ಹೆಚ್ಚು ಜನರನ್ನು ಗುಣಪಡಿಸಿದ್ದಾರೆ.

ವೈದ್ಯಕೀಯ ಸೇವೆಯ ಜೊತೆಗೆ ತರಳಬಾಳು ಹೈಸ್ಕೂಲ್, ಚಿಲಕನ ಹಟ್ಟಿಯ ಸ್ಥಾಪಕ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇವರ ಸೇವಾಮನೋಭಾವವನ್ನು ಗುರುತಿಸಿ,ಲೋಕಕಲ್ಯಾಣ ಪ್ರಶಸ್ತಿ ಪಡೆದುಕೊಂಡಿದ್ದು ಈಗಲೂ ತಮ್ಮ ಕಾಯಕ ಮುಂದುವರೆಸಿದ್ದಾರೆ.