Categories
ರಾಜ್ಯೋತ್ಸವ 2004 ರಾಜ್ಯೋತ್ಸವ ಪ್ರಶಸ್ತಿ ವೈದ್ಯಕೀಯ

ಡಾ. ಎಚ್. ಶಂಕರ ಶೆಟ್ಟಿ

ತಮ್ಮ ನಿಸ್ಪೃಹ ಸೇವೆಯಿಂದ ನೂರಾರು ಬಡಜನರ ಆರಾಧ್ಯದೈವವೆನಿಸಿರುವ ವೈದ್ಯಕೀಯ ಕ್ಷೇತ್ರದ ಹಿರಿಯ ಚೇತನ ಡಾ. ಎಚ್. ಶಂಕರ ಶೆಟ್ಟಿ ಅವರು.
೧೯೩೫ರಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕುಗ್ರಾಮ ಹರ್ಕೂರಿನಲ್ಲಿ ಜನಿಸಿದ ಇವರು ಮದರಾಸಿನಲ್ಲಿ ತಮ್ಮ ವೈದ್ಯಕೀಯ ಶಿಕ್ಷಣ ಮುಗಿಸಿ ಮುಂದೆ ವೈದ್ಯಕೀಯ ಶಿಕ್ಷಣದ ಪ್ರಾಧ್ಯಾಪಕರಾಗಿ ಸೇವೆ ಆರಂಭಿಸಿದರು. ಹಿರಿಯ ಶಸ್ತ್ರಚಿಕಿತ್ಸಕರಾಗಿ, ಬೆಂಗಳೂರು ವೈದ್ಯಕೀಯ ವಿದ್ಯಾಲಯದ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಹೀಗೆ ರಾಜ್ಯದ ಬಹುಪಾಲು ವೈದ್ಯಕೀಯ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ ಹಿರಿಮೆ ಇವರದು.
ಶ್ರೀಯುತ ಶಂಕರ ಶೆಟ್ಟಿ ಅವರ ವೈದ್ಯಕೀಯ ಸೇವೆಗೆ ಅಪಾರ ಜನಮನ್ನಣೆಯ ಜೊತೆಗೆ ಡಾ. ಬಿ.ಸಿ. ರಾಯ್ ಪ್ರಶಸ್ತಿ ಸೇರಿದಂತೆ ಅನೇಕ ಸನ್ಮಾನ ಪುರಸ್ಕಾರಗಳು ಸಂದಿವೆ.
ನಿವೃತ್ತಿಯ ನಂತರವೂ ವೈದ್ಯಕೀಯ ಕ್ಷೇತ್ರದಲ್ಲಿ ಬಡಜನರ ಸೇವೆ ಮುಂದುವರಿಸಿರುವ ಹಿರಿಯ ವೈದ್ಯರು ಶ್ರೀಯುತ ಡಾ. ಎಚ್. ಶಂಕರ ಶೆಟ್ಟಿ ಅವರು.