Categories
ರಾಜ್ಯೋತ್ಸವ 2014 ರಾಜ್ಯೋತ್ಸವ ಪ್ರಶಸ್ತಿ ವಿಜ್ಞಾನ ಮತ್ತು ತಂತ್ರಜ್ಞಾನ

ಡಾ. ಕಸ್ತೂರಿ ರಂಗನ್

ವಿಶ್ವದ ಪ್ರಸಿದ್ದ ಬಾಹ್ಯಾಕಾಶ ವಿಜ್ಞಾನಿಗಳಲ್ಲಿ ಒಬ್ಬರಾದ ಡಾ|| ಕೆ. ಕಸ್ತೂರಿ ರಂಗನ್ ಭಾರತೀಯ ಬಾಹ್ಯಾಕಾಶ ಕ್ಷೇತ್ರವನ್ನು ಬೆಳವಣಿಗೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದವರು.

ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಮುಖ್ಯಸ್ಥರಾಗಿ ಜಾಗತಿಕ ಮಟ್ಟದಲ್ಲಿ ಭಾರತೀಯ ಬಾಹ್ಯಾಕಾಶ ವಿಜ್ಞಾನ ಔನ್ನತ್ಯ ಸಾಧಿಸಲು ದುಡಿದ ಡಾ|| ಕಸ್ತೂರಿ ರಂಗನ್ ಅವರು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಅವರು ಪ್ರತಿಷ್ಠಿತ ಪದ್ಮ ಪ್ರಶಸ್ತಿಯೂ ಸೇರಿದಂತೆ ಹಲವು ಗೌರವಗಳಿಗೆ ಭಾಜನರಾಗಿದ್ದಾರೆ.