Categories
ರಾಜ್ಯೋತ್ಸವ 2008 ರಾಜ್ಯೋತ್ಸವ ಪ್ರಶಸ್ತಿ ಶಿಕ್ಷಣ

ಡಾ. ಕುರುಂಜಿ ವೆಂಕಟರಮಣಗೌಡ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪ್ರಮುಖ ಶಿಕ್ಷಣ ಸಂಸ್ಥೆಯಾದ ಕೆ.ವಿ.ಜಿ ಶಿಕ್ಷಣ ಸಮೂಹ ಸಂಸ್ಥೆಗಳ ಬೆನ್ನೆಲುಬು
ಡಾ. ಕುರಂಜಿ ವೆಂಕಟರಮಣ ಗೌಡ ಅವರು.
ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಕುರಂಜಿಬಾಗ್‌ನವರು. ೭೭ ವರ್ಷ ವಯಸ್ಸಿನ ಗೌಡರು ಮೂಲತಃ ಕೃಷಿಕರು. ಮಾಡಿದ್ದು ಮಾತ್ರ ಶೈಕ್ಷಣಿಕ ಕೃಷಿ, ಕೆವಿಜಿ ವೈದ್ಯಕೀಯ ಕಾಲೇಜು, ಆಸ್ಪತ್ರೆ, ಕೆ.ವಿ.ಜಿ ದಂತ ವೈದ್ಯಕೀಯ ಕಾಲೇಜು, ಕೆವಿಜಿ ಆಯುರ್ವೇದ ಕಾಲೇಜು, ಕೆವಿಜಿ ಮೊಬೈಲ್ ಹೆಲ್ತ್ ಯೂನಿಟ್, ಪಾಲಿಟೆಕ್ನಿಕ್, ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಥಮ ದರ್ಜೆ ಕಾಲೇಜು, ಕಾನೂನು ಕಾಲೇಜು ಹೀಗೆ ಪಟ್ಟಿ ದೊಡ್ಡದು.
ಈ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದ ಅನೇಕ ಪ್ರತಿಭಾವಂತರು ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವರು. ತಮ್ಮ ಶಿಕ್ಷಣ ಸಂಸ್ಥೆಗಳ ಮೂಲಕ ವಿದ್ಯೆಯನ್ನು ಧಾರೆಯೆರೆಯುತ್ತಿರುವವರು ಡಾ. ಕುರಂಜಿ ವೆಂಕಟರಮಣ ಗೌಡ ಅವರು.