Categories
ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ ಸಾಹಿತ್ಯ

ಡಾ. ಕೃಷ್ಣ ಕೊಲ್ದಾರ ಕುಲಕರ್ಣಿ

ದಾಸಸಾಹಿತ್ಯದಲ್ಲಿ ಆಳವಾದ ಅಧ್ಯಯನ ಮತ್ತು ಸಂಶೋಧನೆ ಮಾಡಿರುವ ಡಾ.ಕೃಷ್ಣ ಕೊಲ್ದಾರ ಕುಲಕರ್ಣಿ ಅವರು ವಿಜಯಪುರದ ಹಿರಿಯ ವಿದ್ವಾಂಸರು. ಗಮಕದ ಮುಖೇನ ಸಾಹಿತ್ಯವನ್ನು ಜನಪ್ರಿಯಗೊಳಿಸಿದ ಖ್ಯಾತಿ ಇವರದು. ಈವರೆಗೆ ಸುಮಾರು ಐವತ್ತು ಕೃತಿಗಳನ್ನು ರಚಿಸಿದ್ದು ಅವುಗಳಲ್ಲಿ ಸುಮಾರು ೧೪ ಪುಸ್ತಕಗಳು ದಾಸಸಾಹಿತ್ಯದ ಕುರಿತದ್ದೇ ಆಗಿವೆ.
ದಾಸಸಾಹಿತ್ಯದ ಬಗೆಗಿನ ಕುಲಕರ್ಣಿಯವರ ಸಂಶೋಧನೆಯನ್ನು ಪರಿಗಣಿಸಿ, ಕರ್ನಾಟಕ ಸರ್ಕಾರವು ಅವರಿಗೆ ಕನಕಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.