Categories
ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ ಸಂಕೀರ್ಣ

ಡಾ. ಜಯಲಕ್ಷ್ಮಿ ಮಂಗಳಮೂರ್ತಿ

ರಾಯಚೂರಿನ ಎಸ್.ಎಸ್.ಆರ್.ಜೆ ಮಹಿಳಾ ಮಹಾವಿದ್ಯಾಲಯದ ನಿವೃತ್ತ ಅಸೋಸಿಯೇಟ್ ಪ್ರೊಫೆಸರ್ ಆದ ಡಾ. ಜಯಲಕ್ಷ್ಮಿ ಮಂಗಳಮೂರ್ತಿ ಅವರು ಕಳೆದ ನಾಲ್ಕು ದಶಕಗಳಿಂದ ಶೈಕ್ಷಣಿಕ, ಸಾಹಿತ್ಯ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕದಾದ್ಯಂತ ಮತ್ತು ಮಹಾರಾಷ್ಟ್ರ, ಆಂಧ್ರ, ಮದ್ರಾಸ್ ಮುಂತಾದ ಹೊರ ರಾಜ್ಯಗಳಲ್ಲಿಯೂ ಇವರು ಸೇವೆ ಸಲ್ಲಿಸಿದ್ದಾರೆ.
೧೯೯೬ ರಲ್ಲಿ ಗುಲಬರ್ಗಾ ವಿಶ್ವವಿದ್ಯಾಯಲಕ್ಕೆ ಸಲ್ಲಿಸಿದ ‘ಆಧುನಿಕ ಹರಿದಾಸರು’ಮಹಾಪ್ರಬಂಧಕ್ಕೆ ಇವರಿಗೆ ಡಾಕ್ಟರೇಟ್ ಪದವಿ ದೊರೆತಿದೆ. ‘ನರಸಿಂಹ ವಿಠಲ’ಅನ್ನುವ ಅಂಕಿತದಿಂದ ೮೦ ಉಗಾಭೋಗಗಳು ಮತ್ತು ೪೦ ಸಂಕೀರ್ತನೆಗಳನ್ನು ರಚಿಸಿದ ಕೀರ್ತಿ ಇವರದು. ಜೊತೆಗೆ ೧೪ ಸ್ವರಚಿತ ಗ್ರಂಥಗಳು, ೮ ಸಂಪಾದಿತ ಕೃತಿಗಳು, ಬಯಲಾಟ ಭಾಗ-೧,೨ ಮತ್ತು ರಾಯಚೂರು ಜಿಲ್ಲೆಯ ಹರಿದಾಸ ಸಾಹಿತ್ಯ, ಶ್ರೀ ಗೋಪಾಲದಾಸರು, ಶ್ರೀ ಪ್ರಸನ್ನವೆಂಕಟದಾಸರು, ಅಮೋತೋಪಾನ ಮುಂತಾದ ಕೃತಿಗಳನ್ನು ರಚಿಸಿದ ಖ್ಯಾತಿ ಇವರದ್ದು. .