Categories
ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ ಶಿಲ್ಪಕಲೆ

ಡಾ. ಜಿ. ಜ್ಞಾನಾನಂದ

ಕನ್ನಡ ನಾಡಿನ ಸಾಂಪ್ರದಾಯಿಕ ಶಿಲ್ಪಗಳ ಮೂಲ ಬೇರನ್ನು ಕಂಡುಕೊಂಡು ಸಾಂಪ್ರದಾಯಿಕ ಶಿಲ್ಪಕ್ಕೆ ಹೊಸ ಆಯಾಮವನ್ನು ಕಲ್ಪಸುವ ಕೆಲಸವನ್ನು ಸ್ಥಪತಿ ಡಾ. ಜಿ. ಜ್ಞಾನಾನಂದ ಅವರು ಮಾಡುತ್ತಿದ್ದಾರೆ. ಕನ್ನಡದಲ್ಲಿ ಪ್ರಸ್ತುತ ಶಿಲ್ಪಶಾಸ್ತ್ರವನ್ನು ಡಾ. ಜಿ. ಜ್ಞಾನಾನಂದ ಅವರು ರಚಿಸಿದ್ದಾರೆ.
ಕನ್ನಡ ಮಹಾಭಾರತಗಳಲ್ಲಿ ಶಿಲ್ಪ ಮತ್ತು ಶಿಲ್ಪ ಎಂಬ ವಿಷಯದ ಬಗ್ಗೆ ಪ್ರಬಂಧವನ್ನು ಮಂಡಿಸಿ ಡಿ.ಅಟ್ ಪದವಿಯನ್ನು ಪಡೆದಿದ್ದಾರೆ. ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಬ್ರಹ್ಮರ್ಷಿ ಶಿಲ್ಪಗುರುಕುಲಂ ಕಾಲೇಜಿನ ಪ್ರಾಂಶುಪಾಲರಾಗಿ ಕರ್ನಾಟಕ ಸಾಂಪ್ರದಾಯಿಕ ಶಿಲ್ಪಗುರುಕುಲಗಳ ಕೇಂದ್ರದ ಪ್ರಧಾನ ಗುರುಗಳಾಗಿ (ಡೀನ್) ಸೇವೆ ಸಲ್ಲಿಸುತ್ತ ಪಾರಂಪರಿಕ ಶಿಲ್ಪವನ್ನು ಬೋಧಿಸುತ್ತಿದ್ದಾರೆ.