Categories
ರಾಜ್ಯೋತ್ಸವ 2019 ರಾಜ್ಯೋತ್ಸವ ಪ್ರಶಸ್ತಿ ವೈದ್ಯಕೀಯ

ಡಾ. ಜಿ.ಟಿ. ಸುಭಾಷ್

ವೈದ್ಯಕೀಯ ಕ್ಷೇತ್ರದಲ್ಲಿ ಬಹುರೂಪಿ ಸೇವೆ-ಸಾಧನೆಗೈದ ಅಪರೂಪದ ಪ್ರತಿಭಾವಂತರು ಡಾ.ಜಿ.ಟಿ.ಸುಭಾಷ್. ವೈದ್ಯಕೀಯ, ಸಮಾಜಸೇವೆ, ಆಡಳಿತ, ಸಾಮಾಜಿಕ ಕ್ಷೇತ್ರದ ಸಾಧಕರು.
ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಗಂಜಿಗೆರೆಯವರಾದ ಸುಭಾಷ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಜಿ.ಎ.ತಿಮ್ಮಪ್ಪಗೌಡರ ಸುಪುತ್ರರು. ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್, ಎಂ.ಡಿ, ನಿಮ್ಹಾನ್ಸ್‌ನಲ್ಲಿ ಡಿ.ಎಂ.ಮಾಡಿದವರು. ಗ್ರಾಮೀಣ ವೈದ್ಯಕೀಯ ಸೇವೆಗಳ ಬಳಿಕ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ನರವೈದ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರು, ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಪ್ರಥಮ ಡೀನ್ – ನಿರ್ದೇಶಕರಾಗಿ ಸ್ಮರಣೀಯ ಸೇವೆ. ರಾಜೀವಗಾಂಧಿ ವಿವಿ ಹಣಕಾಸು ಸಮಿತಿಯ ಸೆನೆಟ್ ಸದಸ್ಯ, ಕರ್ನಾಟಕ ಮೆಡಿಕಲ್ ಕೌನ್ಸಿಲ್‌ ಸದಸ್ಯ, ಯುಜಿಸಿಯ ಮೆಡಿಕಲ್ ಇನ್ಸ್‌ಪೆಕ್ಟರ್, ಪಿಎಂಎಸ್‌ ವೈನ ವಿಶೇಷ ಆಡಳಿತಾಧಿಕಾರಿ..ಹೀಗೆ ಬಹುಹುದ್ದೆಗಳಲ್ಲಿ ದುಡಿದವರು.ಅಪಸ್ಮಾರದ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಾಗಾರ, ಬೀದಿ ನಾಟಕಗಳು, ಸಮ್ಮೇಳನಗಳು, ಪರಿಸರ ಸಂರಕ್ಷಣೆ-ಧೂಮಪಾನದ ವಿರುದ್ಧ ಜಾಗೃತಿ ಮೂಡಿಸುವಿಕೆ, ಪಾರ್ಶ್ವವಾಯು ಪೀಡಿತರಿಗೆ ಮಾಹಿತಿ-ಚಿಕಿತ್ಸೆ ಮುಂತಾದ ಸಾಮಾಜಿಕ ಕಾರ್ಯಗಳಿಂದಲೂ ಚಿರಪರಿಚಿತರು.ಡಾ. ಬಿ.ಸಿ.ರಾಯ್ ಪ್ರಶಸ್ತಿ, ನಾಡಚೇತನ ಪ್ರಶಸ್ತಿ, ವಿಶ್ವ ಆರೋಗ್ಯ ಸಂಸ್ಥೆಯಿಂದ ಫೆಲೋಶಿಪ್ ಮತ್ತಿತರ ಗೌರವಗಳಿಂದ ಭೂಷಿತರು.