Categories
ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ ಸಮಾಜಸೇವೆ

ಡಾ. ಜೆ. ಎನ್. ರಾಮಕೃಷ್ಣಗೌಡ

ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕಿನ ಜವರನಹಳ್ಳಿಯವರಾದ ಡಾ. ಜೆ. ಎನ್. ರಾಮಕೃಷ್ಣಗೌಡರು, ಶ್ರೀ ಆದಿಚುಂಚನಗಿರಿ ಮಠದ ದೊಡ್ಡಗುರುಗಳಾದ ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಸತ್ಕಾರ್ಯಗಳನ್ನು ಸಾಕಾರಗೊಳಿಸಲು ಶ್ರಮಿಸಿರುವವರಲ್ಲಿ ಅಗ್ರಗಣ್ಯರು.

ಸಾಮಾಜಿಕ, ಆಧ್ಯಾತ್ಮಿಕ, ಶೈಕ್ಷಣಿಕ, ಕಲೆ,ಸಾಹಿತ್ಯ, ಆರೋಗ್ಯ, ಕ್ರೀಡೆ, ವೈದ್ಯಕೀಯ, ಪರಿಸರ ಸಂರಕ್ಷಣೆ, ನೆರೆ ಸಂತ್ರಸ್ತರಿಗೆ ಪರಿಹಾರ ಮುಂತಾದ ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸುತ್ತ ನಾಡಿನ ಏಳಿಗೆಗೆ ಕಾರಣರಾಗಿದ್ದಾರೆ. ಬೆಳ್ಳೂರು ಹಾಗು ಸುತ್ತಮುತ್ತಲಿನ ತಾಲ್ಲೂಕಿನ ಅಭಿವೃದ್ಧಿಗೆ ರಾಮಕೃಷ್ಣಗೌಡರು ದುಡಿದಿದ್ದಾರೆ. ಶ್ರೀಯುತರಿಗೆ ‘ಸಾರ್ಥಕ ಸೇವಾರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇವರ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ, ಅಮೇರಿಕಾದ ಫ್ಲಾರಿಡಾ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ. ಮಂಡ್ಯ ಜಿಲ್ಲಾಡಳಿತದ ವತಿಯಿಂದ ‘ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ನೀಡಿ ಪುರಸ್ಕರಿಸಲಾಗಿದೆ