Categories
ರಾಜ್ಯೋತ್ಸವ 2016 ರಾಜ್ಯೋತ್ಸವ ಪ್ರಶಸ್ತಿ ಶಿಕ್ಷಣ

ಡಾ. ತೇಜಸ್ವಿ ಕಟ್ಟಿಮನಿ

ಡಾ|| ತೇಜಸ್ವಿ ಕಟ್ಟಿಮನಿ ಅವರು ಪ್ರಸ್ತುತ ಮಧ್ಯ ಪ್ರದೇಶದ ಅಮರ ಕಂಟಕದಲ್ಲಿರುವ ಇಂದಿರಾಗಾಂಧಿ ಬುಡಕಟ್ಟು ವಿಶ್ವವಿದ್ಯಾಲಯದ ಉಪಕುಲಪತಿಗಳು. ಧಾರವಾಡದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದು ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ ತೇಜಸ್ವಿ ಕಟ್ಟಿಮನಿ ಅವರು ವಿಶ್ವವಿದ್ಯಾಲಯ ಅಧ್ಯಾಪಕರ ಸಂಘದ ಪದಾಧಿಕಾರಿಗಳಾಗಿ ಸಹ ಸೇವೆ ಸಲ್ಲಿಸಿದ್ದಾರೆ.
ವಾಲ್ಮೀಕಿ ಸಮುದಾಯದ ಅಭ್ಯುದಯಕ್ಕಾಗಿ ರಚನೆಯಾಗಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿರುವ ತೇಜಸ್ವಿ ಕಟೀಮನಿ ಅವರು ಹಲವಾರು ಕೃತಿಗಳನ್ನು ರಚಿಸಿದ್ದಾರೆ. ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟಿನ ನಿರ್ದೇಶಕರಾಗಿ ಸಹ ಸೇವೆ ಸಲ್ಲಿಸಿರುವ ಕಟೀಮನಿ ಅವರು ಅನೇಕ ಅನುವಾದ ಕೃತಿಗಳನ್ನು ಸಹ ಹೊರತಂದಿದ್ದಾರೆ.