Categories
ರಾಜ್ಯೋತ್ಸವ 2017 ರಾಜ್ಯೋತ್ಸವ ಪ್ರಶಸ್ತಿ ಶಿಕ್ಷಣ

ಡಾ|| ಪಿ.ಶಾಮರಾಜು

ಬೆಂಗಳೂರಿನ ಮೂಲ ಸೌಕರ್ಯ ಕ್ಷೇತ್ರಕ್ಕೆ ಅನುಪಮ ಸೇವೆ ಸಲ್ಲಿಸಿರುವ ಡಾ|| ಶ್ಯಾಮರಾಜು ಅವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಗಣನೀಯ.

ಮಾಹಿತಿ ತಂತ್ರಜ್ಞಾನ ರಾಜಧಾನಿ ಎಂದೇ ಹೆಸರಾಗಿರುವ ಬೆಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಿಗೆ ವಿಭಿನ್ನ ಬಗೆಯ ಕಾರ್ಯಸ್ಥಳಗಳನ್ನು ನಿರ್ಮಿಸಿಕೊಟ್ಟಿರುವ ಶ್ಯಾಮರಾಜು ಅವರು ತಮ್ಮ ರೇವಾ ವಿಶ್ವವಿದ್ಯಾನಿಲಯದ ಮೂಲಕ ದೂರದೃಷ್ಟಿಯ ಶಿಕ್ಷಣ ವ್ಯವಸ್ಥೆಗಳನ್ನು ರೂಪಿಸಿದ್ದಾರೆ.

ಬೆಂಗಳೂರಿನ ಟಿಟಿಡಿ ಸಂಸ್ಥೆಯ ದೇವಾಲಯದ ಧರ್ಮದರ್ಶಿಗಳಾಗಿ ಕಾರ್ಯ ನಿರ್ವಹಿಸಿರುವ ಶ್ಯಾಮರಾಜು ಅವರು ಹಲವು ದೇವಾಲಯಗಳ ಅಭಿವೃದ್ಧಿಗಾಗಿ ಶ್ರಮಿಸಿದವರು. ಸಾಮಾಜಿಕ ಕಾರ್ಯಕ್ರಮಗಳಲ್ಲಿಯೂ ಸಕ್ರಿಯವಾಗಿ ತೊಡಗಿಕೊಂಡಿರುವ ಇವರು ಸಂಜೀವಿನಿ ಅಂಬ್ಯುಲೆನ್ಸ್, ವೃದ್ಧಾಲಯ, ಕಾರ್ಮಿಕ ಮಕ್ಕಳ ಶಾಲೆಗಳೇ ಮೊದಲಾದ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದಾರೆ.