Categories
ಕೃಷಿ ರಾಜ್ಯೋತ್ಸವ 2015 ರಾಜ್ಯೋತ್ಸವ ಪ್ರಶಸ್ತಿ

ಡಾ. ಪ್ರಕಾಶ್ ಭಟ್

ಹಳ್ಳಿಗಾಡಿನ ಅಭಿವೃದ್ಧಿಯಲ್ಲಿ ಸಮುದಾಯ ಸಂಪೂರ್ಣವಾಗಿ ಪಾಲುಗೊಳ್ಳುವುದು ಹಾಗೂ ಕೃಷಿ ಕ್ಷೇತ್ರದಲ್ಲಿ ಸಬಲೀಕರಣ ಮಾಡುವ ಉದ್ದೇಶದಿಂದ ಧಾರವಾಡದಲ್ಲಿ ಸ್ಥಾಪನೆಗೊಂಡಿರುವ SCOPE ಎಂಬ ಸರ್ಕಾರೇತರ ಸ್ವಯಂಸೇವಾ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಡಾ|| ಪ್ರಕಾಶ ಭಟ್.
ಗ್ರಾಮೀಣ ಬದುಕನ್ನು ಹಸನುಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಮರ್ಥವಾಗಿ ಉಪಯೋಗಿಸಿಕೊಳ್ಳಲು ಜನತೆಗೆ ಅರಿವು ಮೂಡಿಸುವ ಹಾಗೂ ಆರ್ಥಿಕ ಚೈತನ್ಯವನ್ನು ರೂಪಿಸಿಕೊಳ್ಳಲು ಮಾರ್ಗಗಳನ್ನು ಸಿದ್ಧ ಮಾಡುವ ಕಾರ್ಯಕ್ರಮಗಳನ್ನು ಡಾ|| ಪ್ರಕಾಶ ಭಟ್ ಅವರು ತಮ್ಮ ಸ್ಕೋಪ್ ಸಂಸ್ಥೆ ಮೂಲಕ ಅನುಷ್ಠಾನಗೊಳಿಸುತ್ತಿದ್ದಾರೆ.