Categories
ಪತ್ರಿಕೋದ್ಯಮ ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ

ಡಾ. ಯು. ಬಿ. ರಾಜಲಕ್ಷ್ಮಿ

ಪತ್ರಿಕಾ ಕ್ಷೇತ್ರದಲ್ಲಿ ಸುಮಾರು ೩೮ ವರ್ಷಗಳ ಅನುಭವವಿರುವ ಡಾ. ಯು. ಬಿ. ರಾಜಲಕ್ಷ್ಮಿಯವರು ಪ್ರಸ್ತುತ ‘ತರಂಗ’ವಾರಪತ್ರಿಕೆಯ ಸಂಪಾದಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕನ್ನಡ ಪತ್ರಿಕೋದ್ಯಮದಲ್ಲಿ ಡಿ. ಅಟ್ ಪಡೆದಿರುವ ಮೊದಲ ಪತ್ರಕರ್ತೆ.

ಮುಂಗಾರು, ಹೊಸದಿಗಂತ, ಟೈಮ್ಸ್ ಆಫ್ ಡೆಕ್ಕನ್ ಪತ್ರಿಕೆಗಳಲ್ಲಿ ವರದಿಗಾರ್ತಿಯಾಗಿ ಕೆಲಸ ಮಾಡಿರುವ ಇವರು, ಹಲವು ಕೃತಿಗಳನ್ನು ಹೊರತಂದಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯೆಯಾಗಿದ್ದು, ‘ತುಲಾ ಪ್ರಕಾಶನ’ವನ್ನು ನಿರ್ವಹಣೆ ಮಾಡುತ್ತ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದಾರೆ.