Categories
ರಾಜ್ಯೋತ್ಸವ 2017 ರಾಜ್ಯೋತ್ಸವ ಪ್ರಶಸ್ತಿ ವೈದ್ಯಕೀಯ

ಡಾ|| ಲೀಲಾವತಿ ದೇವದಾಸ್

ಹೈದರಾಬಾದ್ ಕರ್ನಾಟಕದಲ್ಲಿ ಹದಿನೈದು ವರ್ಷಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ ಲೀಲಾವತಿ ದೇವದಾಸ್ ಅವರು ಗಾಂಧಿ ಸ್ಮಾರಕ ಕುಷ್ಠರೋಗ ನಿವಾರಣಾ ನಿಧಿಯಲ್ಲಿ ಸೇವೆ ಸಲ್ಲಿಸಿದವರು.

ಟಿ. ನರಸೀಪುರದಲ್ಲಿ ಕುಷ್ಠರೋಗ ನಿವಾರಣಾ ಸಂಸ್ಥೆಯ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಇವರು ಆರು ವೈದ್ಯಕೀಯ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದರು. ವಿಶ್ರಾಂತ ಜೀವನದಲ್ಲಿಯೂ ಮೂರು ಮಿಷನ್ ಆಸ್ಪತ್ರೆಗಳಲ್ಲಿ ಸಲ್ಲಿಸುತ್ತಿರುವ ಲೀಲಾದೇವಿ ಅವರು ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಿದ ಸೇವೆ ಅನುಕರಣೀಯ.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸುವರ್ಣ ಗೌರವ ಶಾಶ್ವತಿ ಸಂಸ್ಥೆಯ ಸದೋದಿತಾ ಪ್ರಶಸ್ತಿ, ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಶಸ್ತಿ ಗೌರವಗಳನ್ನು ಪಡೆದಿರುವ ಡಾ|| ಲೀಲಾವತಿ ಅವರು ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯದಲ್ಲಿಯೂ ಸಕ್ರಿಯರು.

ಐವತ್ತಕ್ಕೂ ಹೆಚ್ಚು ಆರೋಗ್ಯ ಸಂಬಂಧಿ ಕೃತಿಗಳನ್ನು ರಚಿಸಿರುವ ಇವರು ಅನೇಕ ಪತ್ರಿಕೆಗಳಲ್ಲಿ ಆರೋಗ್ಯ ವಿಷಯವಾಗಿ ಅಂಕಣಗಳನ್ನು ನಿರಂತರವಾಗಿ ಬರೆಯುತ್ತಿದ್ದಾರೆ.