Categories
ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ ವೈದ್ಯಕೀಯ

ಡಾ. ವೇದವ್ಯಾಸ ದೇಶಪಾಂಡೆ

ವೈದ್ಯರು ಹಳ್ಳಿಗಳಲ್ಲಿ ಸೇವೆ ಮಾಡುವುದು ಅಪರೂಪವಾಗಿರುವ ಸಂದರ್ಭದಲ್ಲಿ ಡಾ. ವೇದವ್ಯಾಸ ದೇಶಪಾಂಡೆ ಅವರು ಕಳೆದ ೩೫ ವರ್ಷಗಳಿಂದ ಧಾರವಾಡ ತಾಲ್ಲೂಕಿನ ಹೆಬ್ಬಳ್ಳಿ ಸುತ್ತಮುತ್ತಲಿನ ಸಮುದಾಯಕ್ಕೆ ವೈದ್ಯಕೀಯ ಸೇವೆ ನೀಡುವುದರ ಮೂಲಕ ಬಡವರ ಡಾಕ್ಟರ್ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ.

೧೯೭೮ ರಲ್ಲಿ ‘ಗ್ರಾಮೋತ್ಥಾನ’ ಎಂಬ ಪರಿಕಲ್ಪನೆಯಡಿಯಲ್ಲಿ ಆರಂಭಗೊಂಡ ವೈದ್ಯಕೀಯ ಶಿಬಿರಗಳಲ್ಲಿ ಪಾಲ್ಗೊಂಡ ಡಾ. ದೇಶಪಾಂಡೆ ಅವರು ಹಳ್ಳಿಯಲ್ಲಿ ವೈದ್ಯಕೀಯ ಸೇವೆ ಸಲ್ಲಿಸುವ ನಿರ್ಧಾರ ಕೈಗೊಂಡು ಈಗಲೂ ತಮ್ಮ ಸೇವಾಕಾರ್ಯ ಮುಂದುವರೆಸಿದ್ದಾರೆ. ವೈದ್ಯರಾಗಿದ್ದರೂ ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ಸಾಮಾಜಿಕ ಕಾರ್ಯಗಳಲ್ಲಿಯೂ ಸಹ ತೊಡಗಿಸಿಕೊಂಡು ಬಂದಿದ್ದಾರೆ.