Categories
ರಾಜ್ಯೋತ್ಸವ 2017 ರಾಜ್ಯೋತ್ಸವ ಪ್ರಶಸ್ತಿ ಸಾಹಿತ್ಯ

ಡಾ|| ವೈದೇಹಿ

‘ವೈದೇಹಿ’ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ‘ಜಾನಕಿ ಶ್ರೀನಿವಾಸಮೂರ್ತಿಯವರು ಕನ್ನಡದ ಪ್ರಮುಖ ಲೇಖಕಿ, ಸಣ್ಣಕಥೆ, ಕಾವ್ಯ, ಕಾದಂಬರಿಗಳು, ಮಕ್ಕಳ ಸಾಹಿತ್ಯ, ಅನುವಾದ ಸಾಹಿತ್ಯ, ಪ್ರಬಂಧ ಮುಂತಾದವುಗಳಲ್ಲಿ ತಮ್ಮ ಛಾಪನ್ನು ಮೂಡಿಸಿರುವ ಚಿಂತನಶೀಲ ಬರಹಗಾರರು.

‘ಕ್ರೌಂಚ ಪಕ್ಷಿಗಳು’ ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿರುವ ವೈದೇಹಿಯವರು ‘ಮರಗಿಡಬಳ್ಳಿ’ ಎಂಬ ಸಣ್ಣಕಥಾ ಸಂಕಲನ, ‘ಮಲ್ಲಿನಾಥನ ಧ್ಯಾನ’ ಎಂಬ ಪ್ರಬಂಧ, ‘ಬೆಳ್ಳಿ ಸಂಕೋಲೆಗಳು’ ಎಂಬ ಮಹಿಳಾ ವಿಮೋಚನಾ ಹೋರಾಟ ಕಥನ ಹಾಗೂ ಹಲವಾರು ಅನುವಾದ ಮತ್ತು ಮಕ್ಕಳ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ.

ವೈದೇಹಿಯವರಿಗೆ ನಿರಂಜನ ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘದ ಗೌರವ, ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಅತ್ತಿಮಬ್ಬೆ ಪ್ರತಿಷ್ಠಾನದ ಪುರಸ್ಕಾರ ಸೇರಿದಂತೆ ಹಲವಾರು ಗೌರವಗಳು ಲಭಿಸಿವೆ.