Categories
ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ ವೈದ್ಯಕೀಯ

ಡಾ. ಶಿವನಗೌಡ ರುದ್ರಗೌಡ ರಾಮನಗೌಡ

ಹಳ್ಳಿಯ ಜನರು ಅರೋಗ್ಯ ಸೇವೆಯಿಂದ ವಂಚಿತರಾಗಿ ಕಷ್ಟಪಡುವುದನ್ನು ಕಂಡ ಗೌಡರು, ಉತ್ತರ ಕರ್ನಾಟಕ ಭಾಗದ ಜನರಿಗಾಗಿ ಧಾರವಾಡದಲ್ಲಿ ಆಸ್ಪತ್ರೆಯನ್ನು ೧೯೬೦ ರಲ್ಲಿ ಪ್ರಾರಂಭ ಮಾಡಿದರು. ನಂತರ ಸ್ವಂತ ಕಟ್ಟಡ ನಿರ್ಮಿಸಿ ಸತತ ೪೦ ವರ್ಷಗಳ ಕಾಲ ಒಂದು ಲಕ್ಷಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗಳನ್ನು ಮಾಡಿ ಹಳ್ಳಿಗರ ಪ್ರಾಣ ಉಳಿಸಿ ಬಡಜನರ ವೈದ್ಯರೆಂದು ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಈಗಲೂ ಪ್ರತಿ ಭಾನುವಾರ ಹಳ್ಳಿಗಳಲ್ಲಿ ಉಚಿತವಾಗಿ ಆರೋಗ್ಯ ಶಿಬಿರಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಹಲವಾರು ಸಂಘ ಸಂಸ್ಥೆಗಳಿಂದ ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.