Categories
ರಾಜ್ಯೋತ್ಸವ 2017 ರಾಜ್ಯೋತ್ಸವ ಪ್ರಶಸ್ತಿ ಸಮಾಜಸೇವೆ

ಡಾ|| ಸಯ್ಯದ್ ಷಾ ಖುಸ್ರೋ ಹುಸೇನಿ

ಗುಲಬರ್ಗಾದ ಸ್ವಾಜಾ ಬಂದೇನವಾಜ್ ಅವರ ವಂಶಸ್ಥರಾದ ಖುಸ್ರೋ ಹುಸೇನಿ ತಾವು ಸ್ಥಾಪಿಸಿದ ಖಾಜಾ ವಿದ್ಯಾಸಂಸ್ಥೆಯ ಮೂಲಕ ಶೈಕ್ಷಣಿಕ ಮತ್ತು ಸಮಾಜಮುಖಿ ಸೇವಾ ಕಾರ್ಯಗಳನ್ನು ಆರು ದಶಕಗಳಿಂದ ಅವ್ಯಾಹತವಾಗಿ ನಡೆಸುತ್ತ ಬಂದಿರುವರು.

ಗುಲಬರ್ಗ ಪ್ರದೇಶದಲ್ಲಿರುವ ಮುಸ್ಲಿಂ ಸಮುದಾಯದ ಉನ್ನತಿಗಾಗಿ ಹಲವು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದ ಖುಸ್ರೋ ಹುಸೇನಿ ಅವರು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲವು ಸೌಲಭ್ಯಗಳನ್ನು ಒದಗಿಸಿದವರು.

ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸುತ್ತಿರುವ ಖುಸ್ರೋ ಹುಸೇನಿ ಮುಂದಿನ ಪೀಳಿಗೆಯ ವ್ಯಕ್ತಿತ್ವ ವಿಕಸನಕ್ಕಾಗಿ ಶ್ರಮಿಸಿದ್ದು ಇವರ ಸೇವೆಗಾಗಿ ಕರ್ನಾಟಕ ಉರ್ದು ಅಕಾಡೆಮಿ, ನವದೆಹಲಿಯ ಅಂತರರಾಷ್ಟ್ರೀಯ ಪ್ರಕಾಶನ ಸಂಸ್ಥೆಯ ಪ್ರಥಮ ನಾಗರಿಕ ಪ್ರಶಸ್ತಿ, ಸೇರಿದಂತೆ ಹಲವು ಗೌರವಗಳು ಸಂದಿವೆ.