Categories
ನ್ಯಾಯಾಂಗ ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ

ಡಾ. ಸಿದ್ದರಾಮೇಶ್ವರ ಕಂಟೀಕ

ದೇಶದಾದ್ಯಂತ ಗ್ರಾಹಕರ ವ್ಯಾಜ್ಯಗಳ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸಲು ಶ್ರಮಿಸುತ್ತಿರುವ ಡಾ. ಸಿದ್ದರಾಮೇಶ್ವರ ಕಂಟೀಕ ದೊಡ್ಡ ಹೆಸರು. ರಾಷ್ಟ್ರೀಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಭಾರತ ಸರ್ಕಾರದ ವತಿಯಿಂದ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವೈದ್ಯಕೀಯ ಓದಿಕೊಂಡಿದ್ದರೂ ನ್ಯಾಯಾಂಗ ವಿಚಾರದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು ಗ್ರಾಹಕರ ವ್ಯಾಜ್ಯಗಳನ್ನು ಪರಿಹರಿಸಲು, ವಿಚಾರಗೋಷ್ಠಿ ಹಾಗೂ ಸಂವಾದ ಕಾರ್ಯಕ್ರಮಗಳು ಮತ್ತು ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.