Categories
ಕೃಷಿ ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ

ಡಾ. ಸಿ. ನಾಗರಾಜ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನವರಾದ ಡಾ.ಸಿ.ನಾಗರಾಜ್ ಅವರ ನೆಚ್ಚಿನ ಕ್ಷೇತ್ರ ಕೃಷಿಯಾಗಿದೆ. ಸುಮಾರು ೩೫ ವರ್ಷಗಳ ಸುದೀರ್ಘ ಪರಿಶ್ರಮದಿಂದ ರೈತರಿಗೆ ಅನುಕೂಲವಾಗುವಂಥ ಬಹುಪಯೋಗಿ ಯಂತ್ರವನ್ನು ತಯಾರಿಸಿಕೊಟ್ಟಿದ್ದು ಈ ಯಂತ್ರ ರೈತರಿಗೆ ಅನುಕೂಲ ಮಾಡಿಕೊಟ್ಟಿದೆ.

ಮಾರುತಿ ಕೃಷಿ ಉದ್ಯೋಗ್ ಸಂಸ್ಥೆಯನ್ನು ಸ್ಥಾಪಿಸಿ, ಕೃಷಿ ಯಂತ್ರಗಳನ್ನು ತಯಾರಿಸಿದ್ದು, ರೈತರ ಸಮಯ ಮತ್ತು ಖರ್ಚು ಕಡಿಮೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಇವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಸಾವಯವ ಕೃಷಿಯ ಅಗತ್ಯತೆಯನ್ನು ಮನಗಂಡು ಆ ನಿಟ್ಟಿನಲ್ಲಿ ಸಂಶೋಧನೆ ಮಾಡಿದ್ದಾರೆ. ಇವರ ಸಾಧನೆಗಾಗಿ ರೋಟರಿ ಸಂಸ್ಥೆಯಿಂದ ಎಕ್ಸಲೆನ್ಸ್ ಅವಾರ್ಡ್, ಉಜ್ವಲ ಉದ್ಯಮಿ ಪ್ರಶಸ್ತಿ, ಮಣ್ಣಿನ ಮಗ ಪ್ರಶಸ್ತಿ, ಸಾಲು ಮರದ ತಿಮ್ಮಕ್ಕ ಗೌರವ ಸನ್ಮಾನ, ಎ.ಪಿ.ಜೆ. ಅಬ್ದುಲ್ ಕಲಾಂ ಇನ್ನೋವೇಷನ್ ಅವಾರ್ಡ್‌ಗಳು ಸಂದಿವೆ.