Categories
ರಾಜ್ಯೋತ್ಸವ 2016 ರಾಜ್ಯೋತ್ಸವ ಪ್ರಶಸ್ತಿ ವೈದ್ಯಕೀಯ

ಡಾ. ಹೆನ್ರಿ ಸುಭಾಷ್ ಕೃಷ್ಣ ಬಲ್ಲಾಳ್

ಮಣಿಪಾಲ ವಿಶ್ವವಿದ್ಯಾಲಯದಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಿಸಿ ಪ್ರಸ್ತುತ ಸಹ ಕುಲಾಧಿಪತಿಗಳಾಗಿರುವ ಡಾ|| ಹೆಬ್ರಿ ಸುಭಾಷ್ ಕೃಷ್ಣ ಬಲ್ಲಾಳ್ ಅವರು ವಿದ್ಯೆ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ. ಗಾಮೀಣ ಪ್ರದೇಶಗಳ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸ್ವಯಂಸೇವಾ ಸಂಸ್ಥೆಯನ್ನು ಮುನ್ನಡೆಸುತ್ತಿರುವ ಬಲ್ಲಾಳ್ ಅವರು ಮಣಿಪಾಲ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಬಡ ರೋಗಿಗಳ ವಿಮಾ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದಾರೆ.
ಭಾರತೀಯ ವೈದ್ಯಕೀಯ ಮಂಡಳಿಯ ಸದಸ್ಯರಾಗಿರುವ ಬಲ್ಲಾಳ್ ಅವರು ಎಫ್.ಕೆ.ಸಿ.ಸಿ.ಐ ಉನ್ನತ ಶಿಕ್ಷಣ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಉಡುಪಿ ಜಿಲ್ಲಾ ರಾಜೋತ್ಸವ ಪುರಸ್ಕೃತರೂ ಆಗಿರುವ ಹೆಬ್ರಿ ಸುಭಾಷ್ ಕೃಷ್ಣ ಬಲ್ಲಾಳ್ ಅವರು ಅನೇಕ ಶಿಕ್ಷಣ ಸಂಸ್ಥೆಗಳು ಹಾಗೂ ಸಾಮಾಜಿಕ ಸಂಸ್ಥೆಗಳ ಗೌರವ ಪುರಸ್ಕಾರಗಳಿಗೆ ಪಾತ್ರರಾಗಿದ್ದಾರೆ.