Categories
ರಂಗಭೂಮಿ ರಾಜ್ಯೋತ್ಸವ 2014 ರಾಜ್ಯೋತ್ಸವ ಪ್ರಶಸ್ತಿ

ತೊಟ್ಟವಾಡಿ ನಂಜುಂಡಸ್ವಾಮಿ

ಎಳೆಯ ವಯಸ್ಸಿನಲ್ಲಿಯೇ ರಂಗಭೂಮಿಯ ಕಡೆ ಒಲವನ್ನಿಟ್ಟುಕೊಂಡ ತೊಟ್ಟವಾಡಿ ನಂಜುಂಡಸ್ವಾಮಿ ಹಲವಾರು ನಾಟಕಗಳನ್ನು ಹಾಗೂ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ಕನ್ನಡ ಸಾಹಿತ್ಯ ಲೋಕದ ಅನೇಕ ಕೃತಿಗಳನ್ನು ರಂಗ ರೂಪಾಂತರ ಮಾಡಿರುವ ಇವರು ರಂಗಭೂಮಿಯಲ್ಲಿ ಅಭಿನಯಿಸಿದ್ದಾರೆ. ಸಮಾನ ಮನಸ್ಕರೊಂದಿಗೆ ನಾಟಕ ಸಂಸ್ಥೆಯನ್ನು ಸ್ಥಾಪಿಸಿ ಇವರು ನಿರಂತರವಾಗಿ ನಾಟಕಗಳನ್ನು ಪ್ರದರ್ಶಿಸುತ್ತ ಬಂದಿದ್ದಾರೆ. ಅನೇಕ ರಂಗ ಕೃತಿಗಳನ್ನು, ಅಭಿನಂದನಾ ಗ್ರಂಥಗಳನ್ನು ಹಾಗೂ ವಿಮರ್ಶಾ ಸಂಗ್ರಹಗಳನ್ನು ಸಂಪಾದನೆ ಮಾಡಿರುವ ನಂಜುಂಡಸ್ವಾಮಿ ಅವರು ಕರ್ನಾಟಕ ನಾಟಕ ಅಕಾಡೆಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮೊದಲಾದ ಸಂಸ್ಥೆಗಳ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಸುಮಾರು ಎರಡೂವರೆ ದಶಕಗಳಿಂದ ನಿರಂತರವಾಗಿ ನಾಟಕೋತ್ಸವಗಳನ್ನು ವ್ಯವಸ್ಥೆ ಮಾಡುತ್ತಿರುವ ಇವರು ಆಕಾಶವಾಣಿ, ದೂರದರ್ಶನಗಳಲಿಯೂ ನಾಟಕಗಳನ್ನು ನಡೆಸಿಕೊಟ್ಟಿದ್ದಾರೆ. ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡು ಸಮಾಜ ಸೇವೆ ನಡೆಸುತ್ತಿರುವ ಇವರಿಗೆ ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರಾಜ್ಯ ಪ್ರಶಸ್ತಿಗಳೂ ಸೇರಿ ಅನೇಕ ಗೌರವಗಳು ಸಂದಿವೆ.