Categories
ರಾಜ್ಯೋತ್ಸವ 2016 ರಾಜ್ಯೋತ್ಸವ ಪ್ರಶಸ್ತಿ ಸಮಾಜಸೇವೆ

ನಜೀರ್ ಅಹಮದ್.ಯು.ಶೇಖ್

ಅತಿ ಹೆಚ್ಚು ಬಾರಿ ರಕ್ತದಾನ ಮಾಡುವ ಹೆಸರುವಾಸಿಯಾಗಿರುವ ನಜೀರ್ ಅಹ್ಮದ್ ಯು.ಶೇಖ್ ಅವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಕಳೆದ ಮೂರು ದಶಕಗಳಿಂದ ದುಡಿಯುತ್ತಿದ್ದಾರೆ. ಅನೇಕ ಸಾಮಾಜಿಕ, ಶೈಕ್ಷಣಿಕ, ಭಾವೈಕ್ಯತೆಯ ಕಾರ್ಯಕ್ರಮಗಳನ್ನು ಸಂಘಟಿಸುತ್ತ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ನಜೀರ್ ಅಹ್ಮದ್ ಅವರು ಲಯನ್ಸ್ ಕ್ಲಬ್ ಸೇವಾ ಸಂಸ್ಥೆಯಲ್ಲಿ ಸಹ ಸಕ್ರಿಯ ಕಾರ್ಯಕರ್ತರು.
ಯುವ ಪ್ರಶಸ್ತಿಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಗಳಿಸಿರುವ ನಜೀರ್ ಅವರಿಗೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಉತ್ತಮ ಸಮಾಜ ಸೇವಕರೆಂದು ಗೌರವಿಸಿದೆ. ರಕ್ತದಾನ ನೀಡುವುದರ ಜೊತೆಗೆ ಹಲವಾರು ರಕ್ತದಾನ ಶಿಬಿರಗಳನ್ನು ಏರ್ಪಡಿಸಿರುವುದು ಇವರ ವಿಶೇಷ.