Categories
ರಾಜ್ಯೋತ್ಸವ 2017 ರಾಜ್ಯೋತ್ಸವ ಪ್ರಶಸ್ತಿ ಸಂಘ-ಸಂಸ್ಥೆ

ನಾಗನೂರು ವಚನ ಅಧ್ಯಯನ ಕೇಂದ್ರ ಹಾಗೂ ಪ್ರಕಾಶನ

ಸಾಹಿತ್ಯ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಅಪ್ಪಟ ಕನ್ನಡದ ವಚನಗಳ ತಲಸ್ಪರ್ಶಿ ಅಧ್ಯಯನಕ್ಕಾಗಿ ಮೀಸಲಾದ ಸಂಸ್ಥೆಯೇ ಬೆಳಗಾವಿಯ ನಾಗನೂರು ಶ್ರೀ ರುದ್ರಾಕ್ಷಿ ಮಠದ ವಚನ ಅಧ್ಯಯನ ಕೇಂದ್ರ

ವಚನ ಸಾಹಿತ್ಯದ ಅಭ್ಯಾಸಿಗಳಿಗೆ, ಸಂಶೋಧಕರಿಗೆ ಪೂರಕ ಸಾಮಗ್ರಿಯನ್ನು ಒದಗಿಸುವುದಕ್ಕಾಗಿ ಆರಂಭಿಸಲಾದ ವಚನ ಅಧ್ಯಯನ ಕೇಂದ್ರ ಪ್ರಾತಿನಿಧಿಕ ವಚನಗಳನ್ನು ಬೇರೆ ಬೇರೆ ಭಾಷೆಗಳಿಗೆ ಅನುವಾದಿಸಿ ಪ್ರಕಟಿಸುವ ಕೆಲಸವನ್ನೂ ಮಾಡುತ್ತಿದೆ.

ಈ ಅಧ್ಯಯನ ಕೇಂದ್ರದಲ್ಲಿ ಈಗಾಗಲೇ ಎಪ್ಪತ್ತೊಂಭತ್ತಕ್ಕೂ ಹೆಚ್ಚು ಸಂಶೋಧನಾರ್ಥಿಗಳು ಅಭ್ಯಾಸ ಮಾಡಿ ವಿವಿಧ ವಿಶ್ವವಿದ್ಯಾನಿಲಯಗಳಿಂದ ಡಾಕ್ಟರೇಟ್ ಪದವಿಗಳನ್ನು ಪಡೆದಿದ್ದು, ಇಲ್ಲಿ ಕಳೆದ ಒಂಭೈನೂರು ವರ್ಷಗಳಲ್ಲಿ ರಚಿತವಾದ ಶರಣರ ಅಪರೂಪದ ಸಾಹಿತ್ಯ ಗ್ರಂಥಗಳನ್ನು ಸಂಗ್ರಹಿಸಲಾಗಿದೆ.