Categories
ನ್ಯಾಯಾಂಗ ರಾಜ್ಯೋತ್ಸವ 2017 ರಾಜ್ಯೋತ್ಸವ ಪ್ರಶಸ್ತಿ

ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್

ಬೆಂಗಳೂರಿನಲ್ಲಿ ವಕೀಲಿವೃತ್ತಿ ನಡೆಸುತ್ತಿದ್ದು ನಂತರ ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶರಾಗಿ ನಿವೃತ್ತರಾದರು. ಪ್ರಸ್ತುತ ಸುಪ್ರೀಂ ಕೋರ್ಟ್‌ ಹಿರಿಯ ವಕೀಲರಾಗಿರುವ ನಾಗಮೋಹನದಾಸ್ ಸಂವಿಧಾನ ವಿಚಾರಗಳ ಬಗ್ಗೆ ಅಪಾರ ಜ್ಞಾನವುಳ್ಳವರು.

ನ್ಯಾಯಾಂಗ ಹಾಗೂ ಸಂವಿಧಾನದ ಬಗ್ಗೆ ಹಲವಾರು ಮೌಲ್ಯಯುತ ಕೃತಿಗಳನ್ನು ರಚಿಸಿರುವ ಶ್ರೀಯುತರು ಕರ್ನಾಟಕ ಸರ್ಕಾರದ ಹಲವು ಸಂವಿಧಾನಾತ್ಮಕ ಸಮಿತಿಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ.

ಪ್ರತಿಷ್ಠಿತ ಕರ್ನಾಟಕ ಸರ್ಕಾರದ ‘ಗಾಂಧಿ ಸೇವ’ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ಪತ್ರಕರ್ತ ಟಿ.ಎಸ್.ರಾಮಚಂದ್ರರಾವ್ ಪತ್ರಿಕೋದ್ಯಮ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷರಾಗಿ ನಾಗಮೋಹನದಾಸ್ ಅವರು ಕಾರ್ಯ ನಿರ್ವಹಿಸಿದ್ದಾರೆ.