Categories
ಕಾನೂನು ರಾಜ್ಯೋತ್ಸವ 2015 ರಾಜ್ಯೋತ್ಸವ ಪ್ರಶಸ್ತಿ

ನ್ಯಾ. ಎ.ಜೆ. ಸದಾಶಿವ

ಎ.ಜೆ. ಸದಾಶಿವ ಅವರು ಗ್ರಾಮೀಣ ಪ್ರತಿಭೆ. ಯಶಸ್ವಿ ವಕೀಲರಾಗಿ ನ್ಯಾಯಾಧೀಶರಾಗಿ ನಿವೃತ್ತಿ ನಂತರ ಹಲವು ತನಿಖಾ ಆಯೋಗಗಳ ಮೂಲಕ ಕಾರ್ಯ ನಿರ್ವಹಿಸಿದ್ದಾರೆ. ತಮ್ಮ ಕಾರ್ಯಾನುಭವದ ಹಿನ್ನೆಲೆಯಲ್ಲಿ ಹಲವು ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಸೂಚಿಸಿದ್ದಾರೆ.
ಒಳಮೀಸಲಾತಿ ಆಯೋಗದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ ಸದಾಶಿವ ಅವರು ನ್ಯಾಯಾಂಗ ಕುರಿತ ಹಲವು ರಾಷ್ಟ್ರೀಯ ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸಿದ್ದಾರೆ. ಜೊತೆಗೆ ಹವ್ಯಾಸಿ ರಂಗಭೂಮಿಯ ಕಲಾವಿದರಾಗಿಯೂ ದುಡಿದಿದ್ದಾರೆ.
ಹಲವು ಸಮಾಜಸೇವಾ ಸಂಸ್ಥೆಗಳೊಂದಿಗೆ ಸಕ್ರಿಯರಾಗಿರುವ ಸದಾಶಿವ ಅವರು ಅರ್ಥಪೂರ್ಣ ಚಟುವಟಿಕೆಗಳಲ್ಲಿ ತೊಡಗಿದ್ದಾರೆ.