Categories
ನೃತ್ಯ ರಾಜ್ಯೋತ್ಸವ 2014 ರಾಜ್ಯೋತ್ಸವ ಪ್ರಶಸ್ತಿ ಸಂಗೀತ

ಪಂಕಜಾ ರಾಮಕೃಷ್ಣಯ್ಯ

ಪಂಕಜಾ ರಾಮಕೃಷ್ಣಯ್ಯನವರು ಪದವಿಯ ನಂತರ ನೃತ್ಯದತ್ತ ಒಲವು ಬೆಳಸಿಕೊಂಡು ನಾಟ್ಯಾಚಾರ್ಯ ಎಂ. ವಿಷ್ಣುದಾಸ್ ಗುರುಗಳನ್ನಾಗಿ ಸ್ವೀಕರಿಸಿ ನಾಟ್ಯವನ್ನು ಅಭ್ಯಾಸ ಮಾಡಿದರು. ಭರತನಾಟ್ಯದಲ್ಲಿ ವಿದ್ವತ್ ಪರೀಕ್ಷೆಯಲ್ಲೂ ತೇರ್ಗಡೆಯಾಗಿ ನಂತರ ಕಥಕ್ ಪ್ರಾಕಾರವನ್ನೂ ತಮ್ಮದಾಗಿಸಿಕೊಂಡರು.

ತಾವು ಕಲಿತ ವಿದ್ಯೆಯನ್ನು ಆಸಕ್ತರಿಗೆ ಕಲಿಸುವ ಉದ್ದೇಶದಿಂದ ಪಂಕಜಾ ರಾಮಕೃಷ್ಣಯ್ಯ ಅವರು ಮೈಸೂರಿನಲ್ಲಿ ಸರ್ವೇಶ್ವರ ನೃತ್ಯ ಮಂದಿರದ ಮೂಲಕ ಆಸಕ್ತ ಯುವ ಯುವತಿಯರಿಗೆ, ವಿಶೇಷವಾಗಿ ಹಿಂದುಳಿದ ವರ್ಗಗಳ ಮತ್ತು ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೃತ್ಯ, ಸಂಗೀತ, ವಾದ್ಯ ಸಂಗೀತ, ಚಿತ್ರಕಲೆ ತರಬೇತಿ ನೀಡುವ ಮೂಲಕ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬೆಳೆಸುವಲ್ಲಿ ಅನನ್ಯ ಸಾಧನೆ ಮಾಡಿದ್ದಾರೆ.