Categories
ರಾಜ್ಯೋತ್ಸವ 2017 ರಾಜ್ಯೋತ್ಸವ ಪ್ರಶಸ್ತಿ ಸಂಕೀರ್ಣ

ಪ್ರೊ|| ಬಿ. ಗಂಗಾಧರಮೂರ್ತಿ

ವೃತ್ತಿಯಿಂದ ಪ್ರಾಧ್ಯಾಪಕರಾದ ಗಂಗಾಧರಮೂರ್ತಿಯವರು ಹೆಸರಾಂತ ಬರಹಗಾರರು. ೭೦ರ ದಶಕದಿಂದ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡ ಗಂಗಾಧರಮೂರ್ತಿಯವರು ಶಿಕ್ಷಣ ಕ್ಷೇತ್ರದಲ್ಲಿ ಹಲವು ಪ್ರಯೋಗಗಳನ್ನು ನಡೆಸಿದವರು.

ದಲಿತ ಬಂಡಾಯ ಸಂಘಟನೆಗಳಲ್ಲಿ ಸಕ್ರಿಯವಾಗಿ ಪಾಲುಗೊಂಡಿರುವ ಗಂಗಾಧರ ಮೂರ್ತಿ ಅವರು ಅನೇಕ ಕೃತಿಗಳನ್ನು ರಚಿಸಿದ್ದು, ಬೇರೆ ಭಾಷೆಗಳಿಂದ ಹಲವು ಕೃತಿಗಳನ್ನು ಅನುವಾದ ಮಾಡಿದ್ದಾರೆ.

ಗೌರಿಬಿದನೂರು ಬಳಿಯ ವಿದುರಾಶ್ವತ ಕ್ಷೇತ್ರದಲ್ಲಿ ಸ್ವಾತಂತ್ರ ಸೌಧವನ್ನು ರೂಪಿಸುವಲ್ಲಿ ಗಂಗಾಧರ ಮೂರ್ತಿ ಅವರ ಪಾತ್ರ ಹಿರಿದು.

ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ಹಾಗು ಸಾರ್ವಜನಿಕರನ್ನು ತೊಡಗಿಕೊಳ್ಳಲು ಪೇರೇಪಿಸುತ್ತಿರುವ ಗಂಗಾಧರ ಮೂರ್ತಿ ಅವರು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಜನಜಾಗೃತಿ ಕಾರ್ಯದಲ್ಲಿ ತೊಡಗಿದ್ದಾರೆ.