Categories
ರಾಜ್ಯೋತ್ಸವ 2017 ರಾಜ್ಯೋತ್ಸವ ಪ್ರಶಸ್ತಿ ವಿಜ್ಞಾನ ಮತ್ತು ತಂತ್ರಜ್ಞಾನ

ಬಿ.ಎ.ರಡ್ಡಿ

ಕರ್ನಾಟಕ ಸರ್ಕಾರದ ಇಂಜಿನಿಯರಿಂಗ್ ಇನ್ ಚೀಫ್ ಆಗಿ ನಿವೃತ್ತರಾಗಿರುವ ಬಿ.ಎ.ರಡ್ಡಿ ಅವರು ಕರ್ನಾಟಕದ ಹಲವಾರು ನೀರಾವರಿ ಯೋಜನೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

ಸಣ್ಣ ನೀರಾವರಿ ವಿಭಾಗದಲ್ಲಿ ಸರ್ಕಾರಿ ಯೋಜನೆಗಳನ್ನು ಸಮರ್ಥವಾಗಿ ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಡ್ಡಿ ಅವರು ನಾರಾಯಣಪುರ ಜಲಾಶಯದ ನಿರ್ಮಾಣ ಕಾರ್ಯದಲ್ಲಿ ಮಹತ್ವದ ಕೆಲಸ ಮಾಡಿದ್ದಾರೆ.

ನೀರಾವರಿ ವಿಭಾಗದಲ್ಲಿ ಬಿ.ಎ.ರೆಡ್ಡಿ ಅವರ ಅನುಪಮ ಸೇವೆಯನ್ನು ಗುರುತಿಸಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರ್ ಸಂಸ್ಥೆಯಿಂದ ಅತ್ಯುತ್ತಮ ಇಂಜಿನಿಯರ್, ನವದೆಹಲಿಯ ಫ್ರೆಂಡ್‌ಶಿಪ್ ಫೋರಂನ ಗೌರವ, ಔರಂಗಾಬಾದಿನ ಝಾನ್ಸಿ ಸಂಸ್ಥೆಯ ಪ್ರಶಸ್ತಿ ನೀಡಲಾಗಿದೆ.